ಧಾರವಾಡ: ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಮದನ್, ಸುರೇಶ್, ಹಾಗೂ ಎಲ್.ಎನ್ ವೇಣುಗೋಪಾಲ್ ಮೃತ ದುರ್ಧೈವಿಗಳಾಗಿದ್ದು, ಮೃತರು ಮೂಲತಃ ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ.
ಮೂವರು ಗದಗ ಜಿಲ್ಲೆಯ ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಗದಗ ಮುಂಡರಗಿಯಲ್ಲಿ ತೋಟ ಖರೀದಿ ಮಾಡಲು ಮೂವರು ಕಾರಿನಲ್ಲಿ ತೆರಳಿದ್ದರು. ತೋಟ ನೋಡಿಕೊಂಡು ಮರಳಿ ಬೆಂಗಳೂರಿಗೆ ಹೋಗುವಾಗ ಈ ಘಟನೆ ನಡೆದಿದೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಡಿಕ್ಕಿಯ ರಭಸಕ್ಕೆ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಕಾರಿನಲ್ಲಿ ಕೆಳಗೆ ಸಿಲುಕಿದ್ದ ಮೂವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.