Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಶ್ಮೀರದಲ್ಲಿ ಉಗ್ರರ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆದ PM ಮೋದಿ – ವಿಮಾನ ನಿಲ್ದಾಣದಲ್ಲೇ ಸಭೆ!

    By AIN AuthorApril 23, 2025
    Share
    Facebook Twitter LinkedIn Pinterest Email
    Demo

    ನವದೆಹಲಿ/ ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26ಕ್ಕೂ ಹೆಚ್ಚು ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ ಸೌದಿ ಪ್ರವಾಸವನ್ನ ಮೊಟಕುಗೊಳಿಸಿ ಭಾರತಕ್ಕೆ ವಾಪಸ್​​ ಆಗಿದ್ದಾರೆ.

    Pahalgam Terror Attack: ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್ ಸಾವು!

    ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ. ಮೋದಿ, ತಮಗಾಗಿ ಏರ್ಪಡಿಸಿದ್ದ ಅಧಿಕೃತ ಔತಣಕೂಟವನ್ನು ಬಿಟ್ಟು ತಮ್ಮ ಪ್ರವಾಸ ಮೊಟಕುಗೊಳಿಸಿ ಮಂಗಳವಾರ ರಾತ್ರಿ ದೇಶಕ್ಕೆ ಮರಳಿದ್ದಾರೆ.

    ಇನ್ನು ಪ್ರಧಾನಿ ಮೋದಿ ಅವರ ತ್ವರಿತ ಮರಳುವಿಕೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ರಾಯಲ್ ಪ್ಯಾಲೇಸ್‌ಗೆ ಭೇಟಿ ನೀಡಿ ಸೌದಿ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಸೌದಿ ನಾಯಕರೂ ಕೂಡ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

    ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಭಾರತಕ್ಕೆ ಮರಳಿದ್ದು, ಈ ಬಗ್ಗೆ ಸೌದಿ ಆಡಳಿತಕ್ಕೆ ಮಾಹಿತಿ ನೀಡಲಾಗಿದೆ. ಸೌದಿ ರಾಜಕುಮಾರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದು, ಭಾರತಕ್ಕೆ ಯಾವುದೇ ಸಹಾಯ ಮಾಡಲು ಸಿದ್ಧ ಎಂದು ಭರವಸೆ ನೀಡಿದ್ದಾರೆ.

    ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಮಾಹಿತಿ ಸಭೆ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ದಾಳಿಯ ಕುರಿತು ವಿಸ್ತೃತ ಮಾಹಿತಿ ನೀಡಲಾಯಿತು. ಅಲ್ಲದೇ ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರಿಂದ ಸೂಚನೆ ಸ್ವೀಕರಿಸಲಾಯಿತು ಎಂದು ಮೂಲಗಳು ಖಚಿತಪಡಿಸಿವೆ.

    Demo
    Share. Facebook Twitter LinkedIn Email WhatsApp

    Related Posts

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.