ರಾಮನಗರ:- ಆ ಪಾಕಿಸ್ತಾನ ಮುಂಡೇವನ್ನು ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು ಎಂದು ಈಗ ಒಬ್ಬ ನರಪಿಳ್ಳೆಯನ್ನೂ ಹಿಡಿದಿಲ್ಲ ಎಂದು ಕೇಂದ್ರದ ವಿರುದ್ಧ ಮಾಜಿ ಸಚಿವ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ.
ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ಸಿಗರಿಗೆ ಮಾತ್ರ ಅಲ್ಲ, ದೇಶಕ್ಕೆ ಅನುಮಾನ ಇದೆ. ಪಹಲ್ಗಾಮ್ಗೆ ಉಗ್ರರು ಬಂದು ಅವರ ಕೆಲಸ ಮುಗಿಸಿ ಸುಸೂತ್ರವಾಗಿ ವಾಪಸ್ ಹೋಗಿದ್ದಾರೆ. ದೇಶದ ಭದ್ರತಾ ವ್ಯವಸ್ಥೆ ಏನು ಮಾಡುತ್ತಿತ್ತು? ಪುಲ್ವಾಮ ದಾಳಿ ಸೇರಿ ಸಾಕಷ್ಟು ದಾಳಿ ಆಗಿದೆ. ಅದನ್ನು ಮಾಡಿದ್ಯಾರು, ಅವರು ದೇಶದ ಒಳಗೆ ಹೇಗೆ ಬಂದರು? ಕಾಶ್ಮೀರದ ಭದ್ರತಾ ವ್ಯವಸ್ಥೆ ಕಾಶ್ಮೀರಿ ಪೊಲೀಸರ ಕೈಯಲಿಲ್ಲ, ಲೆಫ್ಟಿನೆಂಟ್ ಗವರ್ನರ್ ಕೈಯಲ್ಲಿದೆ. ಇದಕ್ಕೆ ಲೆಫ್ಟಿನೆಂಟ್ ಗವರ್ನರ್ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.
ದೇಶದ ಸೈನಿಕರಿಂದಲೇ ಈ ದೇಶ ಉಳಿದಿದೆ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯತೆ ಎದ್ದು ಕಾಣಿಸುತ್ತಿದೆ. ಯುದ್ಧ ಆರಂಭವಾದಾಗ ಇಡೀ ದೇಶದ ಜನ ಮೋದಿಗೆ ಸಂಪೂರ್ಣ ಬೆಂಬಲ ಕೊಟ್ಟರು. ಆದರೆ ಇದ್ದಕ್ಕಿದ್ದಂತೆ ಟ್ರಂಪ್ ಹೇಳಿದ ಎಂದು ಯುದ್ಧ ನಿಲ್ಲಿಸಿದರು. ಟ್ರಂಪ್ ಯಾರು? ನಮ್ಮ ದೊಡ್ಡಪ್ಪನಾ, ಚಿಕ್ಕಪ್ಪನಾ? ನಮ್ಮ ದೇಶದ ವಿಚಾರಕ್ಕೆ ಕೈ ಹಾಕುವ ಟ್ರಂಪ್ ಯಾರು? ಟ್ರಂಪ್ ಹೇಳಿದ ಅಂತ ನಿಲ್ಲಿಸಲು ಇವರು ಯಾರು ಎಂದು ಪ್ರಶ್ನಿಸಿದರು.
ಇಂದಿರಾಗಾಂಧಿ 93 ಸಾವಿರ ಬಾಂಗ್ಲಾ ಸೈನಿಕರ ಸೆರೆಹಿಡಿದಿದ್ದರು. ವಾಜಪೇಯಿ ನಮ್ಮ ದೇಶದ ವಿಚಾರಕ್ಕೆ ಮೂರನೇ ವ್ಯಕ್ತಿಗಳ ಪ್ರವೇಶ ಬೇಡ ಅಂದಿದ್ದರು. ಆದರೆ ಮೋದಿಗೆ ಇಚ್ಛಾಶಕ್ತಿಯ ಕೊರತೆ ಇದೆ. ಮೊದಲು ಇತಿಹಾಸ ನೋಡಿಕೊಂಡು ಬರಲಿ. ಟ್ರಂಪ್ ಬಳಿ ಅಚ್ಚೇದಿನ ಪಡೆಯುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು