ಬೋಸ್ಟನ್, ಸ್ಯಾನ್ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವರು ಪ್ರಿಯಾಂಕ್ ಖರ್ಗೆ ಅವರು ಅಮೆರಿಕಗೆ ಕ್ಲಿಯರೆನ್ಸ್ ಸಿಗದ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬರ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ ಧೂಳುತುಂಬಿದ್ಯಾ? ಹಾಗಿದ್ರೆ, ಜಸ್ಟ್ ಹೀಗೆ ಕ್ಲೀನ್ ಮಾಡಿ!
ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ ಸಿಗದ ಕುರಿತು ಮಾತನಾಡಿ, ತಿರಸ್ಕಾರ ಮಾಡಲಿ, ಆದ್ರೆ ಅದಕ್ಕೆ ಕಾರಣ ಕೊಡಬೇಕು. ʻಮೇಕ್ ಇನ್ ಇಂಡಿಯಾʼ ಅಂತಾ ದೊಡ್ಡ ದೊಡ್ಡ ಮಾತುಗಳು ಹೇಳ್ತಾರೆ. ಯಾವುದೇ ಘೋಷಣೆ ಕೊಟ್ಟರೂ ಅದು ಪ್ರಾರಂಭವಾಗಬೇಕಿರೋದು ಕರ್ನಾಟಕದಿಂದ್ಲೇ. ನಮ್ಮಲ್ಲಿ ಅಷ್ಟೊಂದು ಮಾನವ ಸಂಪನ್ಮೂಲ ಹಾಗೂ ಅರ್ಹತೆ ಇದೆ. ಡೆಲಿಗೇಷನ್ಗೆ ಮೊದಲು ತಿರಸ್ಕಾರ ಮಾಡಿದ್ರು ನಂತರ, ಡೆಲಿಗೇಷನ್ಗೆ ಅನುಮತಿ ಕೊಟ್ರು ಅದ್ರೆ ನಮಗೆ ತಿರಸ್ಕಾರ ಮಾಡಿದ್ರು ಎಂದು ಅಸಮಾಧಾನ ಹೊರಹಾಕಿದ್ದಾರೆ
ನಾವು ಆಟ ಅಡೋದಕ್ಕೆ ಅಲ್ಲಿಗೆ ಹೋಗ್ತಿಲ್ಲ, ಜನರಿಗೆ ಉದ್ಯೋಗ ಸೃಷ್ಟಿ ಮಾಡೋದು ನಮ್ಮ ಕರ್ತವ್ಯ. ಬಂಡವಾಳ ತರೋದು ಕೂಡ ನಮ್ಮ ಕರ್ತವ್ಯವಾಗಿದೆ. ಕರ್ನಾಟಕಕ್ಕೆ ಒಳ್ಳೆದಾದ್ರೆ ನಮ್ಮ ರಾಷ್ಟ್ರಕ್ಕೆ ತಾನೆ ಒಳ್ಳೆದು, ಕರ್ನಾಟಕ ದೇಶದ ಅರ್ಥಿಕತೆಯ ಎಂಜಿನ್. ವಿನಾಃ ಕಾರಣ ಸಾರಸಾಗಟಾಗಿ ತಿರಸ್ಕಾರ ಮಾಡೋದು ಸರಿಯಲ್ಲ. ಹೋದ ಬಾರಿ ನಾವು ಎಂ.ಬಿ ಪಾಟೀಲ್ ಅವರು ಅಮೆರಿಕಗೆ ಹೋಗಿದ್ವಿ. ಆಗ 35 ರಿಂದ 40 ಸಾವಿರ ಕೋಟಿ ಲೆಟರ್ ಆಫ್ ಇಂಟೆಂಟ್ ಹಾಗೂ ಎಂಓಯೂ ಗಳಾಗಿದ್ವು. ಅದನ್ನ ಇನ್ವೆಸ್ಟ್ ಕರ್ನಾಟಕದಲ್ಲಿ ಸಾಲಿಡಿಫೈ ಮಾಡಿದ್ವಿ. ಮೊನ್ನೆ ಸೆಮಿಕಂಡಕ್ಟರ್ ಮತ್ತೆ ಎಲೆಕ್ಟ್ರಾನಿಕ್ಸ್ ಮ್ಯಾನಿಫಾಕ್ಚರ್ಗೆ ಸುಮಾರು 20 ಸಾವಿರ ಕೋಟಿ ರೂ ಅನುಮೋದನೆ ಕೊಟ್ಟಿದ್ದೀವಿ. ಇದರ ಪ್ರತಿಫಲವಾಗಿ ಕರ್ನಾಟಕ ಎಲೆಕ್ಟ್ರಾನಿಕ್ಸ್ ಹಬ್ ಹಾಗೂ ಏರೋಸ್ಪೇಸ್ ಹಬ್ ಆಗಿದೆ. ನವೋದ್ಯಮದಲ್ಲಿ ಅಗ್ರಸ್ಥಾನ ಪಡೆದು ಕೊಳ್ಳಲು ಕರ್ನಾಟಕಕ್ಕೆ ಸಾಧ್ಯವಾಗುತ್ತಿದೆ ಎಂದು ರಾಜ್ಯ ಸರ್ಕಾರದ ಕಾರ್ಯಕ್ಷಮತೆಯನ್ನ ವಿವರಿಸಿದ್ದಾರೆ