ಬೆಂಗಳೂರು: ನಾವು ಪರಿಸರವನ್ನು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ’ ಎಂದು ಪ್ರಕೃತಿ ಪೌಂಡೇಶನ್ ಸಂಘದ ಅಧ್ಯಕ್ಷ ಕಿರಣ್ ಅಭಿಪ್ರಾಯಪಟ್ಟರು. ಬೆಂಗಳೂರು ಉತ್ತರ ತಾಲ್ಲೂಕು ದಾಸನಪುರ ಹೋಬಳಿಯ ಚಿಕ್ಕವೀರಯ್ಯನ ಪಾಳ್ಯದ ವಿದ್ಯಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ. ಶ್ರೀ ಶ್ರೀ ಶ್ರೀ ರಮಣಾನಂದಸ್ವಾಮಿಜೀ,ನಾರಾಯಣ್, ಕಿರಣ್, ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ
ಮಾತನಾಡಿದ ಅವರು ಭೂಮಿಯ ಮೇಲೆ ಜೀವವಿರುವ ಪ್ರತಿಯೊಂದು ಜೀವ ರಾಶಿಗೆ ಆಹಾರಕ್ಕಿಂತ ಮೊದಲು ಗಾಳಿ ಅತ್ಯಗತ್ಯವಾಗಿದೆ. ಇಂದಿನ ಸ್ಥಿತಿಗತಿಯನ್ನು ನೋಡುತ್ತಿದ್ದರೆ ಮಾನವನಿಗೆ ಗಿಡಗಳ ಮಹತ್ವದ ಅರಿವು ಉಂಟಾಗುತ್ತಿದೆ. ಮಾನವ ಚಟುವಟಿಕೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟುವುದು ಮತ್ತು ಭೂಮಿಯನ್ನು ರಕ್ಷಿಸುವುದು ಇದರ ಗುರಿಯಾಗಿದೆ’ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮ ಕರ್ತವ್ಯ’ ಎಂದು ಪ್ರಕೃತಿ ಪೌಂಡೇಶನ್ ಅಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ರಮಣಾನಂದಸ್ವಾಮಿ ಜೀ.ಲಕ್ಷ್ಮಿ ನಾರಾಯಣ್, ವಿದ್ಯಾ ಪಬ್ಲಿಕ್ ಸ್ಕೂಲ್ ಸಂಸ್ಥಾಪಕರು, ಪ್ರಕೃತಿ ಪೌಂಡೇಶನ್ ಅಧ್ಯಕ್ಷ ಕಿರಣ್ ಕುಮಾರ್ ಸಿ.ಬೆಟ್ಟ ತಿಮ್ಮೇಗೌಡ್ರು.ವೈಭವ್ ನೇತ್ರಾಲಯ ಫೌಂಡರ್, ಶಾಲೆಯ ಮಕ್ಕಳು ಹಾಗೂ ವಿದ್ಯಾ ಶಾಲಾ ಸಿಬ್ಬಂದಿ ವರ್ಗದವರು ಮುಂತಾದವರಿದ್ದರು,