ಬೆಂಗಳೂರು: ಈ ಕಾಂಗ್ರೆಸ್ ಸರ್ಕಾರ ಸಾಕಪ್ಪ ಸಾಕು ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರ್ಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ. ಜನ ವಿರೋಧಿ ಸರ್ಕಾರ ಜನರನ್ನು ಕಿತ್ತು ತಿನ್ನುತ್ತಿದೆ.
ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೋರಾಟಕ್ಕೆ ನಮ್ಮ ಜತೆ ಕೈ ಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ. ಭ್ರಷ್ಟ ಕಾಂಗ್ರೆಸ್ ನೀತಿಯನ್ನು ಖಂಡಿಸೋಣ ಎಂದು ಅವರು ಕಿಡಿಕಾರಿದ್ದಾರೆ.
ಕಾಕಾ ಪಾಟೀಲ್ ನಿನಗೂ ಫ್ರೀ, ಮಹದೇವಪ್ಪ ನಿನಗೂ ಫ್ರೀ ಅಂತಾ ಪುಂಗಿದ್ದ ಸರ್ಕಾರ ಇವಾಗ ಕಾಣೆ ಆಗಿದೆ. 48 ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ವಿರುದ್ದ ನಮ್ಮ ಹೋರಾಟ. ಯಾವುದೇ ವರ್ಗದಲ್ಲಿ ಬೆಲೆ ಏರಿಕೆ ಬಿಟ್ಟಿಲ್ಲ. ಜನರು ಜೀವನ ಮಾಡೋಕೆ ಆಗ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.