ದೊಡ್ಡಬಳ್ಳಾಪುರ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿಸಿಎಂ ರಾಜೀನಾಮೆಗೆ ಬಿಜೆಪಿ ನಾಯಕರ ಒತ್ತಾಯ ವಿಚಾರವಾಗಿ ಕಾಂಗ್ರೆಸ್ ಮಾಜಿ ಶಾಸಕ ವೆಂಕಟರಮಣಯ್ಯ ಪ್ರತಿಕ್ರಿಯೇ ನೀಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ರಾಜ್ಯದಲ್ಲಿ ಹಲವಾರು ಘಟನೆಗಳು ನಡೆದಿವೆ, ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇರಬಹುದು, ಸರ್ಕಸ್ ದುರಂತ, ತಿರುಪತಿಯಲ್ಲಿ ಆದ ಘಟನೆ ಇರಬಹುದು, ಇವೆಲ್ಲಾ ಆಕಸ್ಮಿಕವಾಗಿ ಹಾಗಿರೊಂತದ್ದು ಎಂದು ಹೇಳಿದರು.
ಈಗಾಗಲೇ ನ್ಯಾಯಾಂಗ ತನಿಖೆಯನ್ನ ಸರ್ಕಾರ ಮಾಡ್ತಿದೆ, ತನಿಖೆಯಾದ ನಂತರ ಸರ್ಕಾರ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತದೆ.
ಈಗಾಗಲೇ ಇದರಲ್ಲಿ ಬೇಜವಾಬ್ದಾರಿಯಾಗಿ ಕೆಲಸ ಮಾಡಿದ ಪೊಲೀಸರನ್ನ ಅಮಾನತು ಮಾಡಲಾಗಿದೆ. ರಾಜೀನಾಮೆ ಕೊಡಿ ಅಂತಾ ಕೇಳಿದ್ರೆ, ಹಿಂದೆ ನಡೆದ ಘಟನೆಗಳಲ್ಲಿ ಯಾಕೆ ಕೇಂದ್ರ ರಾಜ್ಯದವರು ರಾಜೀನಾಮೆ ಕೊಡಲಿಲ್ಲ, ಟೀಕೆ ಮಾಡುತ್ತಿರೋದು ವಿರೋಧ ಪಕ್ಷದವರ ಕೆಲಸ ಮಾಡಲಿ ಎಂದರು.
ಸರ್ಕಾರಕ್ಕೆ ಒಂದು ಇತಿಮಿತಿ ಇದೆ, ಯಾರಾದ್ರು 25 ಲಕ್ಷ ಪರಿಹಾರ ಕೊಟ್ಟಿರೋ ಉದಾಹರಣೆ ಇದೆಯಾ, ಈಗಾಗಲೇ ಸರ್ಕಾರದ ಇತಿಮಿತಿಗಳಲ್ಲಿ ಮೃತಪಟ್ಟಿರೋರಿಗೆ ಪರಿಹಾರ ಘೋಷಿಸಲಾಗಿದೆ ಎಂದು ಮಾಜಿ ಶಾಸಕ ವೆಂಕಟರಮಣಯ್ಯ ಹೇಳಿದರು.