ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ.
ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೂ ಹಾಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಿಎಂ ಹೇಳಿರುವುದು ಸರಿಯಿದೆ. ಅಲ್ಲಿನ ಕಾರ್ಯಕ್ರಮವನ್ನು ಸರ್ಕಾರದ ಜೊತೆ ಕೂಡಿಸುವುದು ಸರಿಯಲ್ಲ ಎಂದರು.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹೈಕಮಾಂಡ್ಗೆ ವರದಿ ನೀಡುತ್ತೇವೆ. ತನಿಖೆ ಆದಷ್ಟು ಬೇಗ ಮುಗಿಯಲಿದೆ. ಇನ್ನೂ ವಿಧಾನಸೌಧದ ಡಿಸಿಪಿ ಬರೆದ ಪತ್ರದ ಬಗ್ಗೆ ಈಗ ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ತನಿಖೆ ನಡೆಯುತ್ತಿದೆ.
ತನಿಖಾ ಹಂತದಲ್ಲಿ ಮಾತಾಡುವುದು ಸರಿಯಲ್ಲ. ನಾಳೆಯೊಳಗೆ ಕೋರ್ಟ್ಗೆ ವರದಿ ನೀಡುತ್ತೇವೆ. ಕೋರ್ಟ್ ಯಾವ್ಯಾವ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಅವುಗಳನ್ನು ಪರಿಗಣಿಸಲಿದೆ ಎಂದು ತಿಳಿಸಿದರು.