ಬೆಂಗಳೂರು: ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅಧಿಕಾರಿಗಳು ಬೇಕು, ಪಕ್ಷದ ಶಾಸಕರು ಬೇಕಿಲ್ಲ,
ಕಂದಾಯ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯ ಎನ್ನುವವನು ನನಗೆ ಅವಮಾನ ಮಾಡಿದ ಮತ್ತು ಸದನದಲ್ಲೂ ಆ ವಿಷಯದ ಪ್ರಸ್ತಾಪ ಆಯಿತು,
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
60 ಜನ ಶಾಸಕರು ಅವನನ್ನು ಬೇರೆ ಕಡೆ ಟ್ರಾನ್ಸ್ಫರ್ ಮಾಡಬೇಕು ಸರ್ಕಾರಕ್ಕೆ ಮನವಿ ಮಾಡಿದರು, ಮುಖ್ಯಮಂತ್ರಿ ಬೆಳಗಾವಿಗೆ ಬಂದಾಗ ನಾನೂ ಎರಡು ಮೂರು ಸಲ ಕಠಾರಿಯ ಬಗ್ಗೆ ಹೇಳಿದೆ, ಆದರೆ ಆಗಿದ್ದೇನು? ಅವನು ಈಗಲೂ ತನ್ನ ಸ್ಥಾನದಲ್ಲಿ ಮುಂದುವರಿದಿದ್ದಾನೆ ಎಂದು ಹೇಳಿದ್ದಾರೆ.
ಬಸವೇಶ್ವರ ಏತ ನೀರಾವರಿಗೆ 200 ಕೋಟಿ ರೂ. ಬೇಕು. 100 ಕೋಟಿ ರೂ. ಗುತ್ತಿಗೆದಾರರಿಗೆ ಬಿಡುಗಡೆಯಾಗಬೇಕಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಬಳಿ ಈ ವಿಚಾರವಾಗಿ ನೂರು ಬಾರಿ ಕೇಳಿದ್ದೇನೆ. ಪ್ರಯೋಜನವಾಗಿಲ್ಲ.
ಅಧಿಕಾರಿಗಳು ಸಂಬಳ ಪಡೆದು ಕಚೇರಿಯಲ್ಲಿ ಕುಳಿತುಕೊಳ್ಳುತ್ತಾರೆ. ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದರು. ಇಂತಹ ಹೊಲಸು ವ್ಯವಸ್ಥೆಯಲ್ಲಿ ಶಾಸಕರಾಗಿದ್ದವರು ಏನು ಮಾಡಬೇಕು?, ರಾಜೀನಾಮೆ ನೀಡುವುದು ಒಳ್ಳೆಯದು ಎಂದು ನಾನು ನೊಂದು ಹೇಳಿದ್ದೆ ಎಂದರು.