ಹುಬ್ಬಳ್ಳಿ:- ಗ್ಯಾರಂಟಿ’ ಯೋಜನೆಗಳ ಅನುಷ್ಠಾನದಿಂದ ಜಮೀನು ಕೆಲಸಕ್ಕೆ ಕೂಲಿ ಕಾರ್ಮಿಕರು ಸಿಗುತ್ತಿಲ್ಲ. ರೈತರ ಸ್ಥಿತಿ ಶೋಚನೀಯವಾಗಿದೆ’ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ದೂರಿದರು.
ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!
ಇಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.’ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು. ಸಮಸ್ಯೆ ಪರಿಹರಿಸಬೇಕು’ ಎಂದರು.
‘ರಾಜ್ಯ ಸರ್ಕಾರವು ಜನರಿಗೆ ಉಚಿತವಾಗಿ ಅಕ್ಕಿ ನೀಡುವುದರ ಜೊತೆಗೆ ಮಹಿಳೆಯರ ಖರ್ಚಿಗೆ ಉಚಿತವಾಗಿ ಹಣ ಕೊಡುತ್ತಿದೆ. ಅದಕ್ಕೆ ಕೃಷಿ ಕೆಲಸಕ್ಕೆ ಯಾರೂ ಬರುತ್ತಿಲ್ಲ. ಕೈಯಲ್ಲಿ ಬ್ಯಾಗ್ ಹಿಡಿದು ಓಡಾಡುವವರ ಸಂಖ್ಯೆ ಹೆಚ್ಚಾಗಿದೆ’ ಎಂದರು.