ಬೆಂಗಳೂರು: ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ.
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ಇದು ಸಮಾಜಕ್ಕೆ ಮಾರಕ ಎಂದು ಹೇಳಿದರು. ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ್ಯಾಪ್ ಬಗ್ಗೆ ಜನರ ಮುಂದೆ ಇಡಲಿ.
ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.