Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕನ್ನಡಕ್ಕಾಗಿ ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ: ಶಿವಣ್ಣ!

    By AIN AuthorMay 31, 2025
    Share
    Facebook Twitter LinkedIn Pinterest Email
    Demo

    ಕಮಲ್ ಹಾಸನ್ ಹೇಳಿಕೆ ವಿವಾದ ಸೃಷ್ಟಿಸಿದ ಬಳಿಕ ಕಮಲ್ ಜೊತೆಗೆ ಶಿವಣ್ಣನನ್ನೂ ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ. ಇದೀಗ ಶಿವಣ್ಣ ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

    ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ!

    ಕನ್ನಡವೇ ನನ್ನ ಮೊದಲ ಆದ್ಯತೆ, ಇದು ಮೊದಲ ಬಾರಿಯಲ್ಲ, ಪ್ರತಿಬಾರಿಯೂ ಕನ್ನಡದ ವಿಷಯ ಬಂದಾಗೆಲ್ಲ ನಾನು ನಿಂತಿದ್ದೇನೆ. ಕನ್ನಡಕ್ಕಾಗಿ ನಾನು ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ, ಅದನ್ನು ಯಾರಿಂದಲೂ ಅಲ್ಲಗಳೆಯಲು ಸಾಧ್ಯವಿಲ್ಲ. ನಾನು ಅಂದಿನ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೆ’ ಎಂದಿದ್ದಾರೆ ಶಿವಣ್ಣ. ನಿಮ್ಮ ಹೆಸರನ್ನು ಕೆಲವರು ವಿವಾದಕ್ಕೆ ಎಳೆಯುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ‘ಇರಲಿ ತೊಂದರೆ ಇಲ್ಲ, ನಾನು ಅದರ ಬಗ್ಗೆ ಎಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ, ನನ್ನ ಆತ್ಮಸಾಕ್ಷಿಗೆ ನಾನು ಸರಿಯಾಗಿದ್ದೇನೆ. ನಾನು ಕಲೆಗಾಗಿ ಬದುಕುತ್ತಿರುವವನು, ಕಲೆಯಿಂದಲೇ ನಾವು, ಎಲ್ಲ ಭಾಷೆಗಳ ಬಗ್ಗೆಯೂ ಗೌರವ ಇದೆ, ಆದರೆ ಕನ್ನಡ ಭಾಷೆಯ ವಿಷಯ ಬಂದಾಗೆಲ್ಲ ಚಿತ್ರರಂಗದ ಪರವಾಗಿ ಬರುವವರಲ್ಲಿ ಮೊದಲಿಗೆ ನಾನಾಗಿರುತ್ತೇನೆ’ ಎಂದಿದ್ದಾರೆ.

    ಕಮಲ್ ಹಾಸನ್ ಅವರ ಅಭಿಮಾನಿ ನಾನು, ಆದರೆ ವೇದಿಕೆ ಮೇಲೆ ಏನು ಮಾತನಾಡಬೇಕು, ಬಿಡಬೇಕು ಎಂಬುದು ಅವರ ಆಯ್ಕೆ. ಆದರೆ ಅವರಿಂದ ಈಗ ಏನು ಬಯಸುತ್ತಿದ್ದಾರೋ ಅದು ಮಾಧ್ಯಮಗಳ ಬಯಕೆ. ಅಂದು ಕಮಲ್ ಮಾತಿಗೆ ನಾನು ಚಪ್ಪಾಳೆ ಹೊಡೆಯುತ್ತಿರುವಂತೆ ದೃಶ್ಯಗಳನ್ನು ಜೋಡಿಸಿ ಕೆಲವರು ತೋರಿಸುತ್ತಿದ್ದಾರೆ. ದಯವಿಟ್ಟು ಅದನ್ನು ಮಾಡಬೇಡಿ, ನಾನು ಕಲಾವಿದ, ಈ ಎಡಿಟಿಂಗ್​ಗಳು ಹೇಗೆ ಆಗುತ್ತವೆ ಎಂಬುದು ನನಗೆ ಗೊತ್ತಿದೆ’ ಎಂದು ಖಾರವಾಗಿಯೇ ಶಿವಣ್ಣ ಹೇಳಿದ್ದಾರೆ.

    ಕಮಲ್ ಹಾಸನ್ ಅವರು ಅಂದು ಆ ಮಾತು ಆಡಿದಾಗ ಅಲ್ಲಿ ಎಲ್ಲರೂ ಇದ್ದರು, ಮಾಧ್ಯಮಗಳ ಮುಂದೆಯೇ ಅವರು ಆ ಮಾತನ್ನಾಡಿದ್ದರು. ಆದರೆ ಅಂದೇ ಆ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದರೆ ವಿಷಯ ಇಷ್ಟು ದೊಡ್ಡದಾಗಿ ಆಗುತ್ತಲೇ ಇರಲಿಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತು ನಾನು ಏನು ಎಂದು, ನನ್ನ ತಂದೆಗೆ ಗೊತ್ತು’ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025

    ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

    June 13, 2025

    ಹೊಸ ಮನೆಗೆ ಕಾಲಿಡುವ ತವಕದಲ್ಲಿದ್ದ ಕನಸು ನುಚ್ಚುನೂರು: ವಿಮಾನ ಪತನದಲ್ಲಿ ನರ್ಸ್ ರಂಜಿತಾ ದುರಂತ ಅಂತ್ಯ

    June 13, 2025

    Ahmedabad plane crash: ಲಂಡನ್‌ನಲ್ಲಿ ಹೊಸ ಬದುಕು ಕಟ್ಟಿಕೊಳ್ಳಬೇಕಿದ್ದ ವೈದ್ಯ ಕುಟುಂಬದ ದುರಂತ ಅಂತ್ಯ..

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.