ಮೈಸೂರು:- ಪೊಲೀಸರಿಗೆ ತಮ್ಮ ಕೆಲಸದ ಮೇಲೆ ಗೌರವ ಇರಬೇಕು. ಕಾನೂನು ಪ್ರಕಾರ ನಡೆದುಕೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷಿಸಿ ಅಮಾಯಕರನ್ನು ಕಾಪಾಡಬೇಕು. ಆದರೆ ಇಲ್ಲಿನ ಪೊಲೀಸರು ಸುಳ್ಳು ಕೇಸ್ ಕೇಸ್ ದಾಖಲಿಸಿ ಅಮಾಯಕ ವ್ಯಕ್ತಿಯನ್ನು ಜೈಲಿಗೆ ಕಳುಹಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಜಿ ಪ್ರಕಾಶ್, ಇಲವಾಲ ಸಬ್ ಇನ್ಸ್ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜಯಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಎತ್ತಿನಮನೆಯವರನ್ನು ಅಮಾನತು ಮಾಡಲಾಗಿದೆ. ಕೊಲೆ ಪ್ರಕರಣದ ವಿಚಾರಣಾಧಿಕಾರಿಗಳಾದ ಇವರು ಸುಳ್ಳು ಚಾರ್ಜ್ಶೀಟ್ ಹಾಕಿ ಜೈಲಿಗೆ ಕಳುಹಿಸಿದ್ದರು.
ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ಗಾಂಧಿ ಎಂಬುವರ ಪುತ್ರ ಸುರೇಶ್ ಅಲಿಯಾಸ್ ಕುರುಬರ ಸುರೇಶ್ ಎಂಬುವನ ವಿರುದ್ಧ ಅಂದು ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಜಿ ಪ್ರಕಾಶ್ ಸುಳ್ಳು ಚಾರ್ಜ್ಶೀಟ್ ಸಲ್ಲಿಸಿದ್ದರು. ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದಾಗ ಸುಳ್ಳು ಚಾರ್ಜ್ಶೀಟ್ ಹಾಕಿರುವುದು ಬೆಳಕಿಗೆ ಬಂದಿದೆ.