Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ: ಕೆ.ವಿ.ಪ್ರಭಾಕರ್ ಬೇಸರ

    By Author AINJune 26, 2025
    Share
    Facebook Twitter LinkedIn Pinterest Email
    Demo

    ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ‌ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ.

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ.

    ಮಾನ್ಯ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು ಮಾತನ್ನು ನೆನಪಿಸಿಕೊಳ್ಳುತ್ತಾರೆ. “ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತದೆ. ಬೆಳೆಯುತ್ತಾ ಅಲ್ಪ ಮಾನವನನ್ನಾಗಿ ಮಾಡಲಾಗುತ್ತದೆ”.

    ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು. ಹೀಗಾದಾಗ ಮಾತ್ರ ಸಾಮಜಿಕ‌ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.

    ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ. ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ.ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, clickbait, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ.

    ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ.ಮೊದಲು ಸತ್ಯ, ನಂತರ ವೇಗ ಎಂಬ ನುಡಿಯು ಈಗ ಇನ್ನೂ ಹೆಚ್ಚು ಪ್ರಸ್ತುತವಾಗಿದೆ.Chat GPT ಇರಬಹುದು ಅಥವಾ AI ಯುಗದಲ್ಲಿ ನಿಮ್ಮತನವನ್ನು ಕಳೆದುಕೊಳ್ಳದೆ ಕಾರ್ಯನಿರ್ವಹಿಸಿದರೆ, ಕೃತಕತೆ ಇಲ್ಲದ ಯಶಸ್ಸು ಸಾಧ್ಯ.

    ಇದನ್ನು ಸಾಧಿಸಲು ಶಿಕ್ಷಣ ಮತ್ತು ತರಬೇತಿಯ ಅಗತ್ಯತೆ ಇದೆ.
    ಪ್ರತಿಯೊಬ್ಬ ಮಾಧ್ಯಮ ವಿದ್ಯಾರ್ಥಿಗೆ ನಿಖರ ಮಾಹಿತಿ ಸಂಗ್ರಹಣೆ, ಬೋಧನೆಯ ಶೈಲಿ, ವಿಶ್ಲೇಷಣಾತ್ಮಕ ದೃಷ್ಟಿಕೋನ ಹಾಗೂ ಸಮಾಜದ ಅಸಮಾನತೆಗಳನ್ನು ಗುರುತಿಸುವ ನೈತಿಕ ಬದ್ಧತೆ ಅತ್ಯಗತ್ಯ. ಮಾಧ್ಯಮ ಇಂದಿನ ಕಾಲದಲ್ಲಿ ಕೇವಲ ಸುದ್ದಿಯನ್ನು ನೀಡುವುದಲ್ಲ. ಇವು ಆಲೋಚನೆಗಳನ್ನು, ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯನ್ನೂ ಹೊಂದಿವೆ. ಈ ಕಾರಣಕ್ಕಾಗಿಯೇ ಮಾಧ್ಯಮಗಳನ್ನು opinion makers ಎಂದು ಪರಿಗಣಿಸಲಾಗುತ್ತಿದೆ.

    ನಮ್ಮ ಸರ್ಕಾರ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಮಾಧ್ಯಮ ಅಕಾಡೆಮಿಯ ಮೂಲಕ ತರಬೇತಿ ಶಿಬಿರಗಳು, ಸಂವಾದ ಸಭೆಗಳು, ಗ್ರಾಮೀಣ ಪತ್ರಕರ್ತರ ಪ್ರೋತ್ಸಾಹ, ಡಿಜಿಟಲ್ ಮಾಧ್ಯಮ ತರಬೇತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸತ್ಯನಿಷ್ಠ ಸಮಾಜಮುಖಿ ಪತ್ರಕರ್ತರನ್ನು ರೂಪಿಸುವ ದಿಕ್ಕಿನಲ್ಲಿ ಪ್ರಯತ್ನಿಸುತ್ತಿದೆ.

    ನೀವು ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡುತ್ತಿದ್ದರೆ, ಇದು ಕೇವಲ ಉದ್ಯೋಗವಲ್ಲ. ಇದು ಸಮಾಜದ ಧ್ವನಿ ಆಗುವ, ಧ್ವನಿ ಇಲ್ಲದವರ ಮಾತುಗಳನ್ನು ಎತ್ತಿ ಹಿಡಿಯುವ, ಮತ್ತು ಅಧಿಕಾರದ ಎದುರು ಸತ್ಯವನ್ನು ಹೇಳುವ ಧೈರ್ಯದ ಮಾರ್ಗ ಮತ್ತು ಮಾಧ್ಯಮ ಎನ್ನುವುದನ್ನು ನೆನಪಿನಲ್ಲಿಡಬೇಕು.

    ಪ್ರೀತಿಯ ವಿದ್ಯಾರ್ಥಿಗಳೇ, ಕಲಿಕೆಯ ದಿನಗಳಲ್ಲಿ ಸೃಜನಶೀಲತೆ, ಅಧ್ಯಯನಶೀಲತೆ ಸಂಶೋಧನಾ ಮನೋಭಾವ, ಮತ್ತು ಸಾಮಾಜಿಕ ಜವಾಬ್ದಾರಿಯ ಚಿಂತನೆಯನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು. ತುಮಕೂರು ವಿಶ್ವ ವಿದ್ಯಾಲಯ ಆಯೋಜಿಸಿರುವ ಈ ಮಾಧ್ಯಮ ಹಬ್ಬವು ಮಾಧ್ಯಮ ಕ್ಷೇತ್ರದಲ್ಲಿ ಪ್ರಜ್ಞಾವಂತ ಯುವ ಪ್ರತಿಭೆಗಳ ಹುಟ್ಟಿಗೆ ವೇದಿಕೆಯಾಗಲಿ ಎಂದು ಆಶಿಸುತ್ತೇನೆ ಎಂದರು.

    ತುಮಕೂರು ವಿವಿ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ, ಪ್ರಜಾ ಪ್ರಗತಿ ಸಂಪಾದಕಾದ ನಾಗಣ್ಣ, ಸಿಂಡಿಕೇಟ್ ಸದಸ್ಯರಾದ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಿಣಿ ಅವರು ಉಪಸ್ಥಿತರಿದ್ದರು.

     

    Demo
    Share. Facebook Twitter LinkedIn Email WhatsApp

    Related Posts

    ಪೋಡಿ ಮಾಡಿಸದೆ ಗೋಮಾಳ ಜಮೀನಿನಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಶೀಲ್ದಾರ್ .!

    June 26, 2025

    ಕೋಲಾರ: ಮಹಿಳೆಯನ್ನು ಹಿಂಬಾಲಿಸಿ ಸರಗಳ್ಳತನಕ್ಕೆ ಯತ್ನ..! Video Viral

    June 26, 2025

    ಬೇಲಿಯೇ ಎದ್ದು ಹೊಲ ಮೇಯ್ದ ಕಥೆ.. ಅನ್ನ ಹಾಕಿದ ಬ್ಯಾಂಕಿಗೆ ಕನ್ನ ಹಾಕಿದವ ಏನಾದ ಗೊತ್ತಾ..?

    June 26, 2025

    ಬಾಹ್ಯಾಕಾಶ ನಿಲ್ದಾಣಕ್ಕೆ ಧಾರವಾಡ ಕೃಷಿ ವಿವಿಯ ಹೆಸರು, ಮೆಂತ್ಯೆ ಬೀಜಗಳ ರವಾನೆ..!

    June 26, 2025

    ಗದಗ : ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ‌ದಿನಾಚರಣೆ

    June 26, 2025

    ನಂದಿಬೆಟ್ಟಕ್ಕೆ ಗ್ರಹಗತಿಯೇ ಸರಿಯಿಲ್ಲ: ಮತ್ತೆ ಮತ್ತೆ ಪ್ರವಾಸಿಗರಿಗೆ ಬ್ಯಾನ್ ಆಗ್ತಿರೋ ಸುಂದರ ತಾಣ!

    June 26, 2025

    ಮುಂದೆ ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ: ನಿಖಿಲ್ ಕುಮಾರಸ್ವಾಮಿ

    June 26, 2025

    ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    June 26, 2025

    ಕೇಂದ್ರ ಸರ್ಕಾರ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ಆದ್ರೂ ರಾಜ್ಯದ ಅಭಿವೃದ್ಧಿಗೆ ಬದ್ಧ: ಶರಣಬಸಪ್ಪ ದರ್ಶನಾಪುರ

    June 26, 2025

    ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರ ಎಂಟ್ರಿ! 7 ಲಕ್ಷ ಸುಲಿಗೆ ಮಾಡಿದ್ದ ಗ್ಯಾಂಗ್ ಅರೆಸ್ಟ್

    June 26, 2025

    ಶಿಗ್ಗಾವಿ: ಶಿವಾನಂದ ಕುನ್ನೂರು ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

    June 26, 2025

    ಹಾಡಹಗಲೇ ಕಂಟ್ರಾಕ್ಟರ್ ನನ್ನು ಕೊಚ್ಚಿ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.