ಬೆಂಗಳೂರು: ಐಶ್ವರ್ಯಾ ಗೌಡ ಅವರಿಂದ ಚಿನ್ನದ ವ್ಯಾಪಾರಿಗೆ 9.82 ಕೋಟಿ ರೂ. ವಂಚಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಇನ್ನೂ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ಐಶ್ವರ್ಯ ಗೌಡ ಪ್ರಕರಣ ಮತ್ತು ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ, ಯಾರೋ ತಮ್ಮ ಹೆಸರ ದುರುಪಯೋಗ ಪಡಿಸಿಕೊಂಡು ಜನರನ್ನು ವಂಚಿಸುತ್ತಿರುವುದು ತಮ್ಮ ಗಮನಕ್ಕೂ ಬಂದಿತ್ತು,
ಈ ಬಗ್ಗೆ ಸುರೇಶ್ ದೂರನ್ನು ಕೂಡ ದಾಖಲಿಸಿದ್ದಾರೆ, ಇಂದು ಬೆಳಗ್ಗೆ ಈಡಿ ಅಧಿಕಾರಿಗಳು ನೋಟೀಸ್ ತೆಗೆದುಕೊಂಡು ಬಂದಾಗ, ಸುರೇಶ್ ಮನೆಯಲ್ಲಿರಲಿಲ್ಲ, ಅದರೆ ತಾನಿದ್ದೆ, ಸುರೇಶ್ ಈಡಿ ಕಚೇರಿಗೆ ಬಂದು ವಿಚಾರಣೆ ಎದುರಿಸುತ್ತಾರೆಂದು ಅವರಿಗೆ ಹೇಳಿ ಕಳಿಸಿದೆ ಎಂದು ಹೇಳಿದರು.