ದಾವಣಗೆರೆ: ತಮ್ಮ ವ್ಯವಹಾರಗಳ ಮೇಲೆ ವ್ಯಾಮೋಹ ಇರುವವರನ್ನು ಸಂಪುಟದಲ್ಲಿ ಮುಂದುವರಿಸುವ ಅಗತ್ಯವಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,
ಸಂಪುಟ ವಿಸ್ತರಣೆಯ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆಯುತ್ತಿದೆ, ಅದು ನಡೆಯಬೇಕು ಮತ್ತು ಹೊಸಬರಿಗೆ ಹಾಗೂ ಯುವಕರಿಗೆ ಅವಕಾಶ ಸಿಗಬೇಕು ಎಂದು ಹೇಳಿದರು.
ಸಂಪುಟದಲ್ಲಿರುವ 8-10 ಸಚಿವರಿಗೆ ಮಂತ್ರಿಯಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ವ್ಯವಹಾರಗಳನ್ನು ನೋಡಿಕೊಂಡು ಹೋಗುವುದು ಹೆಚ್ಚು ಮುಖ್ಯವಾಗಿದೆ, ಅಂಥವರನ್ನು ಸಂಪುಟದಲ್ಲಿ ಮುಂದುವರಿಸುವುದರಲ್ಲಿ ಅರ್ಥವಿಲ್ಲ,
ನಿಮ್ಮ ವ್ಯಹಾರಗಳ ಮೇಲೆ ಗಮನ ಹರಿಸಿ ಅಂತ ಬಿಡುಗಡೆ ಮಾಡಬೇಕು ಎಂದು ಬಸವರಾಜು ಹೇಳಿದರು. ನೀವೂ ಸಚಿವ ಸ್ಥಾನದ ಆಕಾಂಕ್ಷಿಯೇ ಅಂತ ಕೇಳಿದಾಗ, ನಾನೇನೂ ಸನ್ಯಾಸಿ ಅಲ್ಲವಲ್ಲ ಎಂದು ಅವರು ಹೇಳಿದರು.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಮರು ಜಾತಿಗಣತಿ ವಿಚಾರವಾಗಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ಮಾತನಾಡುತ್ತೇನೆ. ಈ ಬಗ್ಗೆ ಸಿಎಂ ದೆಹಲಿಯಲ್ಲಿ ಮಾತಾಡಿದಂತೆ ಕಾಣುತ್ತದೆ. ಮರು ಜಾತಿಗಣತಿ ಮಾಡುವುದಾದರೆ ನಾನು ಆ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಜಾತಿ ಗಣತಿ ವ್ಯವಸ್ಥಿತವಾಗಿ ಆಗಿಲ್ಲ ಎಂಬ ವಿಚಾರ ಹಿಂದಿನಿಂದಲೂ ಹೇಳುತ್ತಿದ್ದೇನೆ. ಹಳೆಯ ವರದಿಯಲ್ಲಿ 60 ಸಾವಿರ ಲಿಂಗಾಯತರು ಇದ್ದಾರೆ ಎಂಬ ವರದಿ ತಪ್ಪಾಗಿತ್ತು. ಮರು ಸಮೀಕ್ಷೆ ಮಾಡಲು ನಾನೇ ಮೊದಲಿಗ ಎಂದು ಹೇಳಿಕೊಂಡಿದ್ದಾರೆ.