Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

    By AIN AuthorJune 9, 2025
    Share
    Facebook Twitter LinkedIn Pinterest Email
    Demo

    ಮೈಸೂರು, ಜೂನ್ 8: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ  ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    Rain News: ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕು!

    ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

    ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ  ಕ್ರಮ  ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ ಎಂದರು. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದರು.

    *ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ*

    ವಿಧಾನಸೌಧದ  ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಪಿಎಆರ್ ನಿಂದ ಷರತ್ತುಬದ್ದ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು.

    *ಕಾಲ್ತುಳಿತದ ಘಟನೆ ಸರ್ಕಾರಕ್ಕೆ ನೋವು ತಂದಿದೆ*

    ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಇದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದರು.

    *ಕ್ರೀಡಾಂಗಣ ಸ್ಥಳಾಂತರದ ಬಗ್ಗೆ ಪರಿಶೀಲಿಸಿ ತೀರ್ಮಾನ*

    ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎಂದರು.

    *ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ*

    ಈ ಪ್ರಕರಣದಲ್ಲಿ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲ. ಆದರೆ ಘಟನೆ ದು:ಖ ತಂದಿದೆ ಎಂದರು.

    *ಬಿಜೆಪಿಯ ಇಂತಹ ಇಬ್ಬದಿತನದ ನಿಲುವು*

    ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಪತ್ರ ಬರೆದಿದ್ದಾರೆ. ಆದರೆ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ರಾಜ್ಯ ಬಿಜೆಪಿಯ ಇಂತಹ ಇಬ್ಬದಿತನದ ನಿಲುವು ತೋರುತ್ತದೆ ಎಂದರು.

    *ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ*

    ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದ ಪ್ರಕರಣದಲ್ಲಿ ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜಿನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜಿನಾಮೆ ಕೇಳಿದರೇ? ಎಂದು ಮರುಪ್ರಶ್ನಿಸಿದರು.

    ಸುಹಾಸ್ ಶೆಟ್ಟಿ ಪ್ರಕರಣದಲ್ಲಿ, ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

    ದಸರಾ ಪೂರ್ವಭಾವಿ ಸಭೆ ಹಾಗೂ ಕೆಡಿಪಿ ಸಭೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಸೂರಿನಲ್ಲಿ ಕೆಡಿಪಿ ಹಾಗೂ ದಸರಾ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

    ನರೇಗಾ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಏನ್ ಡಿ ಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಬಯಸಿದಾಗ ರಾಜ್ಯಗಳು ಹಣ ಪಡೆಯಬೇಕಾದ ಪರಿಸ್ಥಿತಿ ಇದೆ ಎಂದರು

    Demo
    Share. Facebook Twitter LinkedIn Email WhatsApp

    Related Posts

    ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ವಾಹನಕಳ್ಳತನ: ಇಬ್ಬರು ಅರೆಸ್ಟ್!

    June 9, 2025

    Rain News: ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕು!

    June 9, 2025

    ಏರ್ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಯುಕನನ ಶವ ಪತ್ತೆ!

    June 9, 2025

    ಹುಬ್ಬಳ್ಳಿ:-ಖಾಸಗೀಕರಣದಿಂದ ರೈಲ್ವೆ ವಿಭಾಗದಲ್ಲಿ ಅಸುರಕ್ಷತೆ

    June 9, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!

    June 8, 2025

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!

    June 8, 2025

    ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

    June 8, 2025

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.