ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಜೀವನಶೈಲಿ ಸರಿಯಿಲ್ಲದಿದ್ದರೆ, ದೇಹದಲ್ಲಿ ಅನೇಕ ರೋಗಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಆಯಾಸ ಮತ್ತು ಅನಾರೋಗ್ಯವು ವ್ಯಕ್ತಿಯ ಮೇಲೆ ಒತ್ತಡ ಹೇರುತ್ತದೆ. ಕೆಟ್ಟ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಅನೇಕ ರೋಗಗಳು ಜನರನ್ನು ಕಾಡುತ್ತಿವೆ.
ಅಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಅಥವಾ ನಿವಾರಿಸಲು ಮನೆಮದ್ದುಗಳು ಉತ್ತಮ ಫಲಿತಾಂಶಗಳನ್ನು ನೀಡಬಹುದು. ಆಯುರ್ವೇದದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಸಬ್ಜ ಬೀಜಗಳೊಂದಿಗೆ ಮಧುಮೇಹ ಮತ್ತು ಮಲಬದ್ಧತೆಯನ್ನು ತಡೆಯುವುದು ಹೇಗೆ ಎಂದು ತಿಳಿಯೋಣ.
ಅಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಅಥವಾ ನಿವಾರಿಸಲು ಮನೆಮದ್ದುಗಳು ಉತ್ತಮ ಫಲಿತಾಂಶಗಳನ್ನು ನೀಡಬಹುದು. ಆಯುರ್ವೇದದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಸಬ್ಜ ಬೀಜಗಳೊಂದಿಗೆ ಮಧುಮೇಹ ಮತ್ತು ಮಲಬದ್ಧತೆಯನ್ನು ತಡೆಯುವುದು ಹೇಗೆ ಎಂದು ತಿಳಿಯೋಣ.
ಮಧುಮೇಹವನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ ಕೆಲವು ಮನೆ ಸಲಹೆಗಳು ಮತ್ತು ಆಯುರ್ವೇದ ಔಷಧಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಸಬ್ಜಾ ಬೀಜಗಳು ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬುಗಳು ಮತ್ತು ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿವೆ.
ಮಧುಮೇಹದಿಂದ ಬಳಲುತ್ತಿರುವವರು ಸಬ್ಜ ಬೀಜಗಳನ್ನು ಸೇವಿಸಬಹುದು. ಅವುಗಳನ್ನು ನೀರಿನಲ್ಲಿ ನೆನೆಸಿಟ್ಟು ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಫಲಿತಾಂಶ ಸಿಗುತ್ತದೆ.
ಇದು ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಡಿಮೆ ನೀರು ಕುಡಿಯುವುದರಿಂದ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದ ಮೂತ್ರನಾಳದ ಸೋಂಕು ತಗುಲುತ್ತದೆ.. ಸಾಧ್ಯವಾದಷ್ಟು ನೀರು ಕುಡಿಯುವುದರ ಜೊತೆಗೆ, ಸಬ್ಜ ಬೀಜಗಳು ಮೂತ್ರನಾಳದ ಸೋಂಕನ್ನು ಸಹ ಗುಣಪಡಿಸುತ್ತದೆ.