ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ನೋಡಿದ ಖದೀಮರು ಮನೆ ಬಾಗಿಲಿನ ಲಾಕ್ ಮುರಿದು ಮನೆಯಲ್ಲಿದ್ದ 12 ತೊಲೆ ಬಂಗಾರ, ಬೆಳ್ಳಿ ಹಣವನ್ನು ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯ ಗುಡಿಹಾಳ ರೋಡ್ ವಾಣಿಪ್ಲಾಟ್ದಲ್ಲಿ ರಾತ್ರಿ ನಡೆದಿದೆ.
ಅಲ್ಲಾವುದ್ದೀನ್ ಎಂ. ಲೊಂಡೆವಾಲೆ ಎಂಬುವವರ ಮನೆ ಕಳ್ಳತನವಾಗಿದೆ. ಮನೆಯವರು ರಾತ್ರಿ ಆಸ್ಪತ್ರೆಗೆಂದು ಹೋಗಿದ್ದಾರೆ. ಮರಳಿ ಬರುವಷ್ಟರಲ್ಲಿ ಕಳ್ಳರು ಇಡೀ ಮನೆಯನ್ನೇ ದೋಚಿಕೊಂಡು ಹೋಗಿದ್ದಾರೆ. ಮನೆಯಲ್ಲಿದ್ದ ಬೀರುವಿನ ಲಾಕರ್ಗಳನ್ನು ಮುರಿದು ಸುಮಾರು 12 ತೊಲೆ ಬಂಗಾರ, 60 ಗ್ರಾಮ ಬೆಳ್ಳಿ, ಒಂದು ಲಕ್ಷ ರೂ. ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳತನವಾದ 12 ತೊಲೆಯಲ್ಲಿ ಕೆಲವೊಂದಿಷ್ಟು ಬಂಗಾರದ ಆಭರಣಗಳನ್ನು ಮನೆಯ ಸುತ್ತಮುತ್ತ ಸಿಕ್ಕಿವೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಗರ್ ಕಂಟ್ರೋಲ್ ಗೆ ತರಲು ಬೆಳಗಿನ ಜಾವ ತುಪ್ಪಕ್ಕೆ ಈ ಪುಡಿ ಬೆರೆಸಿ: ಆಮೇಲೆ ನೋಡಿ ಚಮತ್ಕಾರ!
ಇನ್ನು ಕೆಲವೇ ದಿನಗಳಲ್ಲಿ ಮದುವೆ ಇರೋದಕ್ಕೆ ಇಷ್ಟೊಂದು ಬಂಗಾರ ತಂದಿಟ್ಟಿದ್ದರು. ಈಗ ಕಳ್ಳತನವಾಗಿದ್ದರಿಂದ ಮನೆಯವರು ಚಿಂತೆಗೀಡಾಗಿದ್ದಾರೆ.