ಬೆಂಗಳೂರು: ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ’ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ವಿಚಾರವಾಗಿ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈ ಎರಡು ಪ್ರಕರಣದಲ್ಲಿ ಸರ್ಕಾರ ಹೇಗೆ ದಾರಿ ತಪ್ಪಿದೆ ಎಂದು ಗೊತ್ತಾಗ್ತಿದೆ. ಅಭಿವೃದ್ಧಿ ಕೆಲಸ ಆಗ್ತಿಲ್ಲ. ಕ್ಷೇತ್ರಕ್ಕೂ ಅನುದಾನ ಸಿಗ್ತಿಲ್ಲ. ಶಿಕ್ಷಣ ಇಲಾಖೆ ಎಲ್ಲೋ ಹೋಗಿದೆ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಮಕ್ಕಳು ಓದಿ ಅಂಕ ಪಡೆದರು ಸಚಿವರು ನಮ್ಮ ಸಾಧನೆ ಎಂದು ಹೇಳಿಕೊಳ್ತಾರೆ. ಸರ್ಕಾರದ ಯಾವ ಇಲಾಖೆಯೂ ಸರಿಯಾಗಿ ಕೆಲಸ ಆಗಿಲ್ಲ. ಎರಡು ವರ್ಷಗಳಲ್ಲಿ ಹಗರಣಗಳೇ ಈ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ.
ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ. ಸಂತೋಷದ ವಿಷಯ ಎಂದರೆ ರಾಜ್ಯದ ಡ್ಯಾಂಗಳು ತುಂಬುತ್ತಿವೆ. ಡ್ಯಾಂ ತುಂಬಿದ್ರು ರೈತರು ಸಂಕಷ್ಟದಲ್ಲಿ ಇದ್ದಾರೆ. ಮಾವು ಬೆಳೆ ನಷ್ಟ ಆಗಿದೆ. ರೈತನ ಪರ ಸರ್ಕಾರ ನಿಲ್ಲಬೇಕು ಅಂತ ಒತ್ತಾಯಿಸಿದ್ದಾರೆ.