ಚಾಮರಾಜನಗರ:- ಚಾಮರಾಜನಗರದ ಕಲ್ಯಾಣ ಮಂಟಪದಲ್ಲಿ ಅಡುಗೆ ಕೆಲಸವನ್ನು ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ಸು ಬರುತ್ತಿದ್ದಾಗ ಕಾಳನಹುಂಡಿ ಗೇಟ್ ಬಳಿ ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಕುಲಗಾಣ ಗ್ರಾಮದ ಮಲ್ಲೇಶ್ (45) (ಅಡುಗೆ ಭಟ್ಟರು ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಮಲ್ಲೇಶ್ ಅಡುಗೆ ಭಟ್ಟರಾಗಿ ಕೆಲಸ ನಿವ೮ಹಿಸುತ್ತಿದ್ದು ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಶುಕ್ರವಾರ ಅಡುಗೆ ಕೆಲಸ ಮುಗಿಸಿಕೊಂಡು ಸ್ವಗ್ರಾಮ ಕುಲಗಾಣಕ್ಕೆ ತೆರಳುತ್ತದ್ರು ಎನ್ನಲಾಗಿದೆ ಈ ವೇಳೆ ಟಿಪ್ಪರ್ ಡಿಕ್ಕಿಯಾಗಿ ಮಲ್ಲೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೂಡಲೆ ಸ್ಥಳಕ್ಕೆ ಆಗಮಿಸಿದ ಚಾಮರಾಜನಗರ ಗ್ರಾಮಾಂತರ ಪೋಲೀಸರು ಮೃತ ದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ.