ಬೆಂಗಳೂರು: ಬೆಂಗಳೂರಿನಲ್ಲಿ ಯುವಕರ ವ್ಹೀಲಿಂಗ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಅದಕ್ಕೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಕ್ರಮ ಹಾಗೂ ಕಾರ್ಯಾಚರಣೆ ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವ್ಹೀಲಿಂಗ್ ಮಾಡ್ತಿದ್ದ ಯುವಕ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿತ್ತು.
ಅಲ್ಲದೆ ಅಪಾಯದ ಬಗ್ಗೆ ಅರಿವಿದ್ದರೂ ಯುವಕರು ವ್ಹೀಲಿಂಗ್ ಮಾಡುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ. ವ್ಹೀಲಿಂಗ್ ಮಾಡುತ್ತ ತಮ್ಮ ಜೀವವನ್ನೂ ಅಪಾಯದಲ್ಲಿಟ್ಟು ಇತರ ಸವಾರರ ಜೀವಕ್ಕೂ ಕುತ್ತಾಗುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಸಂಚಾರಿ ಪೊಲೀಸರು ಕಠಿಣ ಕ್ರಮ ಆರಂಭಿಸಿದ್ದಾರೆ.
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ಬೆಂಗಳೂರು ನಗರದಾದ್ಯಂತ ಚುರುಕಿನ ಕಾರ್ಯಾಚರಣೆ ನಡೆಸಲಾಗುತ್ತಿದೆ. ಒಂದೇ ತಿಂಗಳಲ್ಲಿ 398 ಪ್ರಕರಣಗಳು ದಾಖಲಾಗಿವೆ. ಕಾರ್ಯಾಚರಣೆ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಒಟ್ಟಾರೆಯಾಗಿ 398 ಪ್ರಕರಣ ದಾಖಲಾಗಿದ್ದು, 324 ಮಂದಿ ಪುಂಡರನ್ನು ಬಂಧಿಸಲಾಗಿದೆ. 397 ಬೈಕ್ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ವ್ಹೀಲಿಂಗ್ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದಾರೆ.
40 ಮಂದಿ ಪುಂಡರ ಚಾಲನಾ ಪರವಾನಗಿ (ಡಿಎಲ್) ತಾತ್ಕಾಲಿಕ ರದ್ದುಗೊಳಿಸಲಾಗಿದೆ. 197 ಆರ್ಸಿ ರದ್ದತಿಗೆ ಪತ್ರ ಬರೆಯಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತರ ಕೈಗೆ ಬೈಕ್ ಕೊಟ್ಟ 62 ಮಂದಿ ಪೋಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. 82 ಮಂದಿ ಅಪ್ರಾಪ್ತರ ವಿರುದ್ಧವೂ ಕೇಸ್ ದಾಖಲಿಸಲಾಗಿದೆ. ಬಾಲ ನ್ಯಾಯ ಕಾಯ್ದೆ (ಜುವೈನಲ್ ಆ್ಯಕ್ಟ್) ಅಡಿ 32 ಪ್ರಕರಣ ದಾಖಲಿಸಲಾಗಿದೆ.