ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿ ಘಟನೆ ನಡೆದಿದೆ.
ರಾಜೇಶ್ (11) ಮತ್ತು ಶಿವಶಂಕರ್ (12) ಮೃತ ಯುವಕರಾಗಿದ್ದು, ಮಕ್ಕಳು ಕ್ರಿಕೆಟ್ ಆಡಿದ ನಂತರ ಮಕ್ಕಳು ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ನಾಲ್ವರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದಾರೆ. ಈ ವೇಳೆ ಒಬ್ಬ ನೀರಿಗಿಳಿದ ಕೂಡಲೇ ಮುಳುಗಿದರೆ, ಆತನ ರಕ್ಷಣೆಗೆಂದು ನೀರಿಗಿಳಿದ ಮತ್ತೊಬ್ಬ ಬಾಲಕ ಕೂಡ ಮುಳುಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಪರಮದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ರಾಜೇಶ್ ಮತ್ತು ಶಿವಶಂಕರ್ ಮೃತದೇಹಗಳನ್ನು ಹೊರತೆಗೆದಿದ್ದಾರೆ.