ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಎಲ್ಲೇಮಾಳ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಘಟನೆಯಲ್ಲಿ ಬೆಂಗಳೂರು ಮೂಲದ ಕಗ್ಗಲಪುರದ ನಿವಾಸಿ ಪವಿತ್ರ (24) ಹಾಗೂ ಲಕ್ಷ್ಮಮ್ಮ (55)ಎಂಬಾತರಿಗೆ .ಪೆಟ್ಟಾಗಿರುವುದಾಗಿ ವರದಿಯಾಗಿದೆ.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಗಾಯಾಳುಗಳು ಪ್ರಯಾಣಿಸುತ್ತಿದ್ದ ಕಾರು (ನಂಬರ್ KA 05 NN 9315) ಬೆಂಗಳೂರಿನಿಂದ ಮಹದೇಶ್ವರ ಬೆಟ್ಟದತ್ತ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರು ಎಲ್ಲೇಮಾಳ ರಸ್ತೆಯಲ್ಲಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಕೂಡಲೇ ಸ್ಥಳೀಯರು ಗಮನಿಸಿ ಗಾಯಗೊಂಡಿರುವ ಇಬ್ಬರನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿದ್ದಾರೆ. ಈ ಘಟನೆಯ ಮಾಹಿತಿಯನ್ನು ಪಡೆದ ಹನೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.