ದೊಡ್ಡಬಳ್ಳಾಪುರ: ಯುವತಿ ಕಿರುಕುಳ ತಾಳಲಾರದೆ ವಿಷ ಸೇವಿಸಿ ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ನಡೆದಿದೆ. ಮಂಜುನಾಥ್ ಮೃತ ದುರ್ದೈವಿಯಾಗಿದ್ದು, ಸಾವಿಗೆ ಗಗನ ಎಂಬ ಯುವತಿ ಕಾರಣ ಎಂದು ಜೂ 13ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವತಿ ನಂಬಿಸಿ ಮೋಸ ಮಾಡಿದ್ದಾಳೆ. ಆಕೆಗೆ ಬೇರೋಬ್ಬನ ಜೊತೆಯಲ್ಲಿ ಸಂಬಂಧವಿತ್ತು. ಆದ್ರೂ ಕೂಡ ನಾನು ಮದುವೆ ಆಗಲು ತೀರ್ಮಾನ ಮಾಡಿದ್ದೆ. ಆದರೆ ಆಕೆ ನನ್ನನ್ನು ಜೈಲಿಗೆ ಕಳಿಸಿದ್ದಳು. 28/02/2025 ರಂದು ಕುಂಬಳಗೋಡು ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?
ಅದಲ್ಲದೆ ಬೇಲ್ ವಿಚಾರವಾಗಿ ಹಣ ಪಡೆದಿದ್ದಳು. ಹಣಕ್ಕೆ ಹೆಚ್ಚು ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾಳೆ ಎಂದು ವಿಡಿಯೋದಲ್ಲಿ ಆರೋಪ ಮಾಡಲಾಗಿದ್ದು,
ವಿಷದ ಮಾತ್ರೆಗಳನ್ನು ಸೇವಿಸಿದ ಮಂಜುನಾಥ್ ನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದು, ಮಂಜುನಾಥ್ ಕುಟುಂಬಸ್ಥರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಯುವತಿ ಗಗನ ಮೇಲೆ ದೂರು ನೀಡಲಾಗಿದೆ.