ಬೆಂಗಳೂರು:- ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಹೂಗುಚ್ಛ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತ ಮಾಡಿದ್ದಾರೆ. ಬಳಿಕ ಅವರು ಖಾಸಗಿ ಹೋಟೆಲ್ ನತ್ತ ಪ್ರಯಾಣ ಬೆಳಸಿದರು.
ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್.ಅಶೋಕ್ ವಾಗ್ದಾಳಿ!
ಅಮಿತ್ ಶಾ ಅವರು ನಾಳೆ ಬಿಜಿಎಸ್ ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ನಾಳೆ ಮಧ್ಯಾಹ್ನ ದೆಹಲಿಗೆ ವಾಪಸ್ ಆಗಲಿದ್ದಾರೆ.