ಸ್ಯಾಂಡಲ್ವುಡ್ ಬುಲ್ ಬುಲ್ ಬೆಡಗಿ ರಚಿತಾ ರಾಮ್ ಸುದ್ದಿಯಲ್ಲಿದ್ದಾರೆ. ಸಂಜು ವೆಡ್ಸ್ ಗೀತಾ 2 ಸಿನಿಮಾದ ಪ್ರಚಾರಕ್ಕಾಗಿ ನಟಿ ಬರ್ತಿಲ್ಲ ಅಂತಾ ಇಡೀ ಚಿತ್ರತಂಡ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ಅವರು ಫಿಲ್ಮಂ ಚೇಂಬರ್ಗೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಇದೀಗ ನಟಿ ರಚಿತಾ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.
‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ರೀತಿಯೇ ‘ಉಪ್ಪಿ ರುಪ್ಪಿ’ ಚಿತ್ರತಂಡ ಕೂಡ ರಚಿತಾ ವಿರುದ್ಧ ಕೆಂಡವಾಗಿದೆ. ಚಿತ್ರೀಕರಣಕ್ಕೆ ಬಾರದೇ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡಿದೇ ರಚಿತಾ ರಾಮ್ ಸತಾಯಿಸಿದ್ದಾರೆ ಎನ್ನಲಾಗಿದೆ. ‘ಉಪ್ಪಿ ರುಪ್ಪಿ’ ಸಿನಿಮಾದ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.
8 ವರ್ಷಗಳ ಹಿಂದೆ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದಲ್ಲಿ ‘ಉಪ್ಪಿ ರುಪ್ಪಿ’ ಸಿನಿಮಾ ಸಿದ್ಧವಾಗಬೇಕಿತ್ತು. ವಿಜಯಲಕ್ಷ್ಮಿ ಅರಸ್ ನಿರ್ಮಾಣದ ಆ ಸಿನಿಮಾಗೆ ಕೆ. ಮಾದೇಶ್ ನಿರ್ದೇಶನ ಮಾಡುತ್ತಿದ್ದರು. ಆ ಚಿತ್ರದಲ್ಲಿ ನಟಿಸಲು ರಚಿತಾ ರಾಮ್ ಒಪ್ಪಿಕೊಂಡಿದ್ದರು. 23 ಲಕ್ಷ ರೂಪಾಯಿ ಸಂಭಾವನೆಗೆ ಕಮಿಟ್ ಆಗಿದ್ದ ರಚಿತಾ ಅವರು ಮುಂಗಡವಾಗಿ 13 ಲಕ್ಷ ರೂಪಾಯಿ ಪಡೆದುಕೊಂಡಿದ್ದರಂತೆ.
ಅಲ್ಲದೇ ಚಿತ್ರತಂಡ 2017ರಲ್ಲಿ ಬ್ಯಾಂಕಾಕ್ನಲ್ಲಿ ಶೂಟಿಂಗ್ ಮಾಡೋದಕ್ಕೆ ಪ್ಲಾನ್ ಕೂಡ ಮಾಡಿತ್ತು. ಅವರಿಗೆ ಬರುವುದಾಗಿ ಒಪ್ಪಿಕೊಂಡು ಆಮೇಲೆ ಟಿಕೆಟ್ ಬುಕ್ ಮಾಡಿದ್ರು ರಚಿತಾ ಬಂದಿಲ್ಲವಂತೆ. 15 ದಿನಗಳ ಕಾಲ ಈಗ ಬರ್ತೀನಿ, ಆಗ ಬರ್ತೀನಿ ಅಂತ ಆಟ ಆಡಿಸುತ್ತಿದ್ದರಂತೆ. ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು 15 ದಿನ ಟಿಕೆಟ್ ಬುಕ್ ಮಾಡಿ ರೂಮ್ ಬುಕ್ ಮಾಡಿಕೊಂಡು ಕಾದಿದ್ದರಂತೆ. ಆದ್ರೆ ರಚಿತಾ ರಾಮ್ ಬರದಿದ್ದಕ್ಕೇ ಹೀರೋ ಪೋರ್ಷನ್ ಶೂಟ್ ಮಾಡಿಕೊಂಡು ವಾಪಾಸ್ ಆಗಿತ್ತಂತೆ ಚಿತ್ರತಂಡ. ಒಂದು ದಿನ ಮಾತ್ರ ಮೈಸೂರಿನಲ್ಲಿ ನಡೆದ ಶೂಟಿಂಗ್ನಲ್ಲಿ ಭಾಗಿಯಾಗಿದ್ದರಂತೆ. ಹೀಗಾಗಿ ನಿರ್ಮಾಪಕಿ ರಚಿತಾ ರಾಮ್ನಿಂದ ಒಂದುವರೆ ಕೋಟಿ ಕಳೆದುಕೊಂಡಿದ್ದೇನೆ. ಅವತ್ತಿನಿಂದ ಸಂಪರ್ಕಕ್ಕೆ ಸಿಗದೇ ನಟಿ ಸತಾಯಿಸುತ್ತಿದ್ದಾರೆ ಅಂತ ಆರೋಪಿಸಿದ್ದಾರೆ.