ಬೆಂಗಳೂರು: ಬೈಕ್ ಸವಾರನಿಗೆ ಕಸದ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಥಣಿಸಂಧ್ರ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಬೈಕ್ ಸವಾರ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಿಬಿಎಂಪಿ ಕಸದ ಲಾರಿಗೆ ಅಪಘಾತ ಸಂಭವಿಸುತ್ತಿರುವುದು ಥಣಿಸಂಧ್ರದಲ್ಲಿ ನಾಲ್ಕನೇ ಪ್ರಕರಣವಾಗಿದ್ದು,
ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!
ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಕಸದ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಕಸದ ಲಾರಿಗೂ ಬೆಂಕಿ ಬೀಳ್ತಿದ್ದಂತೆ ಲಾರಿಯಿಂದ ಚಾಲಕ ಕೆಳಗಿಳಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾರದ್ದು ತಪ್ಪು ಅಂತ ಇನ್ನೂ ಖಚಿತವಾಗಿಲ್ಲ ಆದ್ದರಿಂದ ಇನ್ನಷ್ಟೆ ತನಿಖೆಯಿಂದ ತಿಳಿಯಬೇಕಿದೆ.