Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಧಾನಸೌಧ ನೋಡಲಿಕ್ಕೂ ದುಡ್ಡು: ಪ್ರವಾಸೋದ್ಯಮ ಹೆಸರಿನಲ್ಲಿ ಹಣ ವಸೂಲಿಗೆ ನಿಂತಿದೆಯಾ ಸರ್ಕಾರ ..?

    By Author AINApril 8, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹೌದು, ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ, ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರಿಗೆ ಗಗನ ಕುಸುಮ. ಭದ್ರತಾ ದೃಷ್ಟಿಯಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

    ಸಭೆ ಸಮಾರಂಭಗಳು, ಸರ್ಕಾರಿ ಕಾರ್ಯಕ್ರಮಗಳು ನಡೆಯುವ ವೇಳೆ ವಿಧಾನಸೌಧ ಮುಂಭಾಗದ ಮೆಟ್ಟಿಲುಗಳು ಹಾಗೂ ಬ್ಯಾಕ್ವೆಂಟ್‌ ಹಾಲ್‌ ಗೆ ಸಾರ್ಜಜನಿಕರು ಹೋಗುವ ವ್ಯವಸ್ಥೆ ಇತ್ತು. ಆದರೆ, ಬಾಂಬ್‌ ಸ್ಫೋಟ, ಉಗ್ರರ ದಾಳಿ ಸಾಧ್ಯತೆಗಳ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಭಾರಿ ಭದ್ರತೆ ಕಲ್ಪಿಸಿ ಜನಸಾಮಾನ್ಯರ ಪ್ರವೇಶಕ್ಕೆ ಬ್ರೇಕ್‌ ಹಾಕಲಾಗಿತ್ತು.

    ಆದರೆ, ಇದೀಗ ವಿಧಾನಸೌಧ ನೋಡಲು ಬರೋರಿಂದಲೂ ಹಣ ವಸೂಲಿಗೆ ಸರ್ಕಾರ ಮುಂದಾಗಿದೆ.

    ಗ್ಯಾರಂಟಿಗಾಗಿ ಹಣ ವಸೂಲಿ ?

    ರಾಜ್ಯದಲ್ಲಿ ಯಾವುದೇ ವಸ್ತುಗಳ ಬೆಲೆ ಏರಿಕೆಯಾದರೆ, ಗ್ಯಾರಂಟಿಗಾಗಿ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಖಜಾನೆ ತುಂಬಿಕೊಳ್ಳಲು ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಸಾಮಾನ್ಯವಾಗಿದೆ.

    ಇದೀಗ ರಾಜ್ಯದ ಪಾರಂಪರಕ ಕಟ್ಟಡಗಳಲ್ಲಿ ಒಂದಾದ ವಿಧಾನಸೌಧ ನೋಡಲು ದೇಶ-ವಿದೇಶಗಳಿಂದ, ರಾಜ್ಯದ ಹಳ್ಳಿ-ಹಳ್ಳಿಗಳಿಂದ ಸಾವಿರಾರು ಜನರು ಬರುತ್ತಾರೆ. ಇದೀಗ  ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಶುಲ್ಕ ನಿಗಧಿ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.

    ಪ್ರವಾಸೋದ್ಯಮ ಹೆಸರಿನಲ್ಲಿ  ಶುಲ್ಕ ವಸೂಲಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆಯಾ ಎಂಬ ಆರೋಪ ಕೇಳಲಾರಂಭಿಸಿದೆ. ವಿಧಾನಸೌಧ ವೀಕ್ಷಣೆಗೆ ಗೈಡೆಡ್ ಟೂರ್ ವ್ಯವಸ್ಥೆ ಜಾರಿಗೆ ತರಲುಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ. ಈ ಮೂಲಕ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧಾರ ಮಾಡಿದೆ..

    ಪ್ರವಾಸೋಧ್ಯಮ ಇಲಾಖೆಯಿಂದ ಗೈಡ್ ಟೂರ್ ಮಾಡಲು ಸರ್ಕಾರ ಪ್ರವಾಸೋದ್ಯಮ ಇಲಾಖೆಗೆ ಷರತ್ತು ಬದ್ಧವಾಗಿ ಅನುಮತಿ ನೀಡಿದೆ. ಪ್ರವೇಶ ಶುಲ್ಕ ನೀಡಿ ಒಳಗೆ ಬರಲು ಕೆಲವೊಂದು ಷರತ್ತು ಹಾಕಲಾಗಿದೆ.

     

    ವಿಧಾನಸೌಧ ನೋಡಲು ಷರತ್ತು

    * ಸಾರ್ವತ್ರಿಕ ರಜೆ ದಿನದಂದು ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೂ ಅವಕಾಶ

    * 30ಜನರ ತಂಡದೊಂದಿಗೆ ವೀಕ್ಷಣೆಗೆ ಅವಕಾಶ

    * ಆನ್ ಲೈನ್ ಮುಖಾಂತರ ಟಿಕೆಟ್ ಬುಕ್  ಮಾಡಿಕೊಳ್ಳಬೇಕು

    * ಪ್ರವೇಶ ದರವನ್ನ ನೀಡಿ ಬರಬೇಕು

    * ಪೊಲೀಸ್ ಭದ್ರತಾ ಸೂಚನೆ ಪಾಲಿಸಬೇಕು

    * ಅಧಿಕೃತ ದಾಖಲೆಯನ್ನು ನೀಡಿ ಪ್ರವೇಶ ಮಾಡಬೇಕು.

    * ವಿಧಾನಸೌಧದ ಕಟ್ಟಡ, ಆವರಣಕ್ಕೆ ಹಾನಿಯಾಗದಂತೆ ಸಹಕರಿಸಬೇಕು

    * ಕಡ್ಡಾಯವಾಗಿ ಎಲ್ಲಾ ನಿಯಮಗಳನ್ನು ಪಾಲಿಸಬೇಕು

    ಸರ್ಕಾರದ ಬೆಲೆ ಏರಿಕೆ ನಿರ್ಧಾರಗಳು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಜನರಿಂದ ಹಣ ವಸೂಲಿಗೆ ಮುಂದಾಗಿದೆ ಎಂಬ ಆರೋಪಕ್ಕೆ ಇದು ಹೊಸ  ಸೇರ್ಪಡೆಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025

    ಶಿಗ್ಗಾವಿಯಲ್ಲಿ ಹಾಡಹಗಲೇ ಗುತ್ತಿಗೆದಾರನ ಭೀಕರ ಹತ್ಯೆ: ಕೊಚ್ಚಿ ಕೊಂದವನ ಮನೆಗೆ ಬೆಂಕಿ ಇಟ್ಟರು..!

    June 25, 2025

    ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್’ನಲ್ಲಿ ಯಶಸ್ವಿಯಾಗಿ ನಡೆದ ಬೃಹತ್ “ಉಚಿತ ಆರೋಗ್ಯ ಶಿಬಿರ”

    June 25, 2025

    ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!

    June 25, 2025

    ಯಂಗ್ ಜೈಂಟ್ಸ್ ಆಫ್ ಹುಬ್ಬಳ್ಳಿ ಹೇಳ್ಪಿಂಗ್ ಹಾಂಡ್ಸ್ ವಿಭಾಗಕ್ಕೆ ದಾನಿಶ್ ಖಾಝಿ ಅಧ್ಯಕ್ಷ

    June 25, 2025

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025

    ಫಸಲಿಗೆ ಬಂದಿದ್ದ “ಹತ್ತಿ”ಗೆ ನೀರಿನಲ್ಲಿ ಕಳೆನಾಶಕ ಔಷಧಿ ಬೆರೆಸಿದ ದುಷ್ಕರ್ಮಿಗಳು..!

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    KRS Damನಲ್ಲಿ ಪ್ರವಾಹ ಭೀತಿ: ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ!

    June 25, 2025

    ಪವಾಡ ಪುರುಷ ಜಗದ್ಗುರು ಶ್ರೀ ನಾಗಲಿಂಗ ಅಜ್ಜನ 144 ನೇ ಆರಾಧನಾ ಮಹೋತ್ಸವ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.