Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಒಂದು ವರ್ಷದಲ್ಲಿ 225 ಪ್ರಕರಣ ಬೇಧಿಸಿ 7 ಕೋಟಿಗೂ ಅಧಿಕ ಮೌಲ್ಯದ ವಸ್ತು ವಶಕ್ಕೆ ಪಡೆದ ವಿಜಯಪುರ ಜಿಲ್ಲಾ ಪೊಲೀಸರು

    By AIN AuthorApril 26, 2025
    Share
    Facebook Twitter LinkedIn Pinterest Email
    Demo

    ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದವು.‌ ಅವುಗಳನ್ನು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಇಂದು ವಾರಸುದಾರರಿಗೆ ಹಿಂತಿರುಗಿಸಿ ಕಾರ್ಯಕ್ಷಮತೆ ತೋರಿದ್ದಾರೆ.

    ವಿಜಯಪುರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಪ್ರಾಪರ್ಟಿ ಪರೇಡ್ ನಡೆಸಿ ಪೊಲೀಸರು ವಾರಸುದಾರರಿಗೆ ಪ್ರಾಪರ್ಟಿ ವಾಪಸ್ ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಡೆದ ಪ್ರಾಪರ್ಟಿ ಪರೇಡ್ ನಲ್ಲಿ ಒಟ್ಟು 7,02,29,764 ರೂಪಾಯಿ ಕಿಮ್ಮತ್ತಿನ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಪ್ರಾಪರ್ಟಿ ಪರೇಡ್ ಮೂಲಕ ಸಂಬಂಧಪಟ್ಟ   3,46,08,100 ರೂ ಕಿಮ್ಮತ್ತಿನ ವಸ್ತುಗಳನ್ನು ಹಿಂದಿರುಗಿಸಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು 225 ಪ್ರಕರಣಗಳನ್ನು ಪತ್ತೆ ಮಾಡಿದ್ದು, ಒಟ್ಟು 345 ಆರೋಪಿತರನ್ನು ದಸ್ತಗಿರಿ ಮಾಡಿದ್ದಾರೆ.

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ; ಅಪರಾಧಿಗೆ ಜೀವಾವಧಿ ಶಿಕ್ಷೆ

    ಇನ್ನೂ ಅಪರಾಧ ಪ್ರಕರಣಗಳ ವಿವರ ನೋಡುವದಾದ್ರೆ 97 ಬಂಗಾರ ಬೆಳ್ಳಿ ಕಳ್ಳತನ ಪ್ರಕರಣಗಳಲ್ಲಿ 152 ಆರೋಪಿಗಳ ಹೆಡೆಮುರಿ ಕಟ್ಟಿ  2,39,85,110 ಮೌಲ್ಯದ 5145.02 ಗ್ರಾಮ ಬಂಗಾರದ ಆಭರಣಗಳು ಮತ್ತು 1723 ಗ್ರಾಂ ಬೆಳ್ಳಿ ಆಭರಣಗಳು ವಶಕ್ಕೆ ಪಡೆದಿದ್ದಾರೆ. 73 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ 102 ಆರೋಪಿಗಳನ್ನು ಬಂಧಿಸಿ 251 ದ್ವಿಚಕ್ರ ವಾಹನ  ಸೇರಿ ಒಟ್ಟು 1.06,72,000 ಗಳ ಮೌಲ್ಯ ದ ವಾಹನ ವಶಕ್ಕೆ ಪಡೆದಿದ್ದಾರೆ. 14 ನಾಲ್ಕು ಚಕ್ರದ ವಾಹನ ಕಳ್ಳತನ ಪ್ರಕರಣಗಳಲ್ಲಿ 12 ವಿವಿಧ ಕಂಪನಿಯ ನಾಲ್ಕು ಚಕ್ರದ ವಾಹನಗಳನ್ನು ವಶಕ್ಕೆ ಪಡೆದು 19 ಜನರನ್ನು ಬಂಧಿಸಿ 1,32,41,000 ಗಳನ್ನು ವಶಕ್ಕೆ ಪಡೆದಿದ್ದಾರೆ. ಟಿಪ್ಪರ್‌ ಕಳ್ಳತನ ಪ್ರಕರಣಗಳಲ್ಲಿ 5 ಜನರನ್ನು ಬಂಧಿಸಿ 19,00,000 ಮೌಲ್ಯದ ಎರಡು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.

    ಇನ್ನೂ ಪೊಲೀಸರು ನಗದು ಕಳ್ಳತನ ಪ್ರಕರಣಳನ್ನು ಬೇಧಿಸಿದ್ದು 19 ಪ್ರಕರಣಗಳಲ್ಲಿ 31 ಆರೋಪಿಗಳನ್ನು ಬಂಧಿಸಿ ಅವರಿಂದ 1,91,89,404 ನಗದು ಹಣ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಇತರೆ 21 ಕಳ್ಳತನ ಪ್ರಕರಣಗಳನ್ನು ಭೇದಿಸಿ 36 ಜನರನ್ನು ಬಂಧಿಸಿದ್ದಾರೆ. ಹೀಗೆ 225 ಪ್ರಕರಣಗಳಲ್ಲಿ 345 ಜನರನ್ನು ಬಂಧಿಸಿ 7,02,29,764 ವಶಕ್ಕೆ ಪಡೆದು ಪ್ರಾಪರ್ಟಿ ಪರೆಡ್  ಮೂಲಕ ಉಳಿದ 3,56.21,664 ರೂ ಕಿಮ್ಮತ್ತಿನ ವಸ್ತುಗಳನ್ನು ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡು ವಾರಸುದಾರರಿಗೆ ನೀಡುವ ವ್ಯವಸ್ಥೆಯನ್ನು ಮುಂದುವರೆಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ. ಇನ್ನೂ ತಮ್ಮ ಸ್ವತ್ತು ತಮಗೆ ವಾಪಸ್ ಸಿಕ್ಕಿದ್ದಕ್ಕೆ ವಾರಸುದಾರರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ: ಸಚಿವ ವೆಂಕಟೇಶ್!

    June 21, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    June 21, 2025

    ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್!

    June 21, 2025

    ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?

    June 21, 2025

    Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

    June 21, 2025

    ಕಾಂಗ್ರೆಸ್ ಈ ದೇಶದಲ್ಲಿ ಇದೇ ಎಂದುಕೊಳ್ಳಲು ಅಸಹ್ಯವಾಗುತ್ತೆ: ಸಚಿವ ವಿ.ಸೋಮಣ್ಣ ಕಿಡಿ

    June 21, 2025

    ಕಾವೇರಿ ನದಿಯಲ್ಲಿ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ..!

    June 21, 2025

    ಬೆಳಗಾವಿ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ರೈತ ಸಾವು..!

    June 21, 2025

    ಮನೆ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ: 267 ಗ್ರಾಂ ಚಿನ್ನ, 470 ಗ್ರಾಂ ಬೆಳ್ಳಿ ವಶಕ್ಕೆ!

    June 21, 2025

    ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ ಭ್ರಷ್ಟಾಚಾರವಿದೆ : ಈಶ್ವರ್ ಖಂಡ್ರೆ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.