ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಮಣಿಸಿ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ.
ಈ ನಡುವೆ ಆರ್ಸಿಬಿ ಅಭಿಮಾನಿಗಳ ಕುರಿತು ಪ್ರತಿಕ್ರಿಯೆ ನೀಡಿದ ವಿರಾಟ್ ಕೊಹ್ಲಿ ಬೆಂಗಳೂರಿನ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಅವರು ತಮ್ಮ ನಿವೃತ್ತ ಕುರಿತು ಕೂಡ ಪ್ರತಿಕ್ರಿಯೆ ನೀಡಿದ್ದಾರೆ
“ನನ್ನ ಹೃದಯ ಬೆಂಗಳೂರಿನೊಂದಿಗಿದೆ, ನನ್ನ ಆತ್ಮ ಬೆಂಗಳೂರಿನೊಂದಿಗಿದೆ ಮತ್ತು ನಾನು ಐಪಿಎಲ್ ಆಡುವವರೆಗೂ ನಾನು ಆಡುವ ತಂಡ ಇದು. ಮಾತ್ರವಲ್ಲ, ಅವರು ಈ ಸಲ ಕಪ್ ನಮ್ದು ಎನ್ನುವ ಮೂಲಕ ಕನ್ನಡಿಗರನ್ನು ರಂಜಿಸಿದರು.
ಹೌದು, ಕಪ್ ಗೆದ್ದ ಬೆನ್ನಲ್ಲೆ ಅವರು ಆರ್ಸಿಬಿ ಅಭಿಮಾನಿಗಳಿಗೆ ಖುಷಿ ಸುದ್ದಿಯನ್ನು ಕೂಡ ನೀಡಿದ್ದಾರೆ. ನಿವೃತ್ತಿಯ ಕುರಿತು ಮಾತನಾಡಿದ ಅವರು, ಈ ಆಟವನ್ನು ಹೆಚ್ಚು ವರ್ಷಗಳ ಕಾಲ ಆಡಲು ನನಗೆ ಅವಕಾಶವಿದೆ. ನನಗೆ ನಿವೃತ್ತಿಗೆ ಇನ್ನೂ ಸಮಯವಿದೆ. ಅದಕ್ಕೂ ಮೊದಲು ನನ್ನಲ್ಲಿರುವ ಸಂಪೂರ್ಣ ಆಟವನ್ನು ಆಡಲು ನಾನು ಭಯಸುತ್ತೇನೆ. ಕೊನೆಗೂ ನನ್ನ ಮಡಿಲಿಗೆ ಕಪ್ ಕೊಟ್ಟಿದ್ದಕ್ಕೆ ಆ ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. 18 ವರ್ಷಗಳು ಕಳೆದಿವೆ. ಈ ಬಾರಿ ನಾನು ನನ್ನ ಯೌವನವನ್ನು ಮರೆತು ನನ್ನ ಅತ್ಯುನ್ನತೆಯ ಆಟವನ್ನು ನೀಡಿದ್ದೇನೆ. ನನ್ನಲ್ಲಿರುವ ಎಲ್ಲವನ್ನೂ ನಾನು ಅದಕ್ಕೆ ನೀಡಿದ್ದೇನೆ. ಈ ದಿನ ಬರುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಕೊನೆಯ ಚೆಂಡು ಎಸೆದ ತಕ್ಷಣ ಭಾವುಕನಾಗಿದ್ದೆ ಎಂದರು.
ಪಂದ್ಯಕ್ಕೂ ಮೊದಲು ಅವರಿಗೆ ಹೇಳಿದ್ದೆ ಇದು ನಮ್ಮಷ್ಟೇ ನಿಮ್ಮದೂ ಮುಖ್ಯ ಮತ್ತು ಅವರು ನಮ್ಮೊಂದಿಗೆ ಸಂಭ್ರಮಾಚರಣೆ ಮಾಡಬೇಕೆಂದು ನಾನು ಬಯಸಿದ್ದೆ ಎಂದು ಡಿವಿಲಿಯರ್ಸ್ ಕುರಿತು ಮಾತನಾಡಿದರು. ಅವರು ನಮಗಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಅವರು 4 ವರ್ಷಗಳ ಹಿಂದೆ ನಿವೃತ್ತರಾಗಿದ್ದಾರೆ. ಅವರು ನಮ್ಮೊಂದಿಗೆ ವೇದಿಕೆಯಲ್ಲಿರಲು ಅರ್ಹರು. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ, ಏನೇ ಇರಲಿ. ನಾನು ಬೇರೆ ರೀತಿಯಲ್ಲಿ ಯೋಚಿಸಿದ ಕ್ಷಣಗಳನ್ನು ಹೊಂದಿದ್ದೇನೆ, ಆದರೆ ನಾನು ಈ ತಂಡಕ್ಕೆ ಅಂಟಿಕೊಂಡಿದ್ದೇನೆ ಎಂದರು.