ಶ್ರೀನಗರ : ಜಮ್ಮುಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲವುಂಟಾಗಿತ್ತು. ಹೊಸ ವಕ್ಫ್ ಕಾಯ್ದೆಗೆ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕರು ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜಮ್ಮುಕಾಶ್ಮೀರ ವಿಧಾನಸಭೆ ಅದಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿದರು. ಆದರೆ ಚರ್ಚೆಗೆ ಅನುಮತಿ ನೀಡದ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ನಿಯಮ 56 ಮತ್ತು 58 (7) ಅನ್ನು ಉಲ್ಲೇಖಿಸಿ ನಿಲುವಳಿ ಸೂಚನೆಯನ್ನು ವಜಾಗೊಳಿಸಿದರು.
ಇದರಿಂದ ವಿಧಾನಸಭೆಯಲ್ಲಿ ಗದ್ದಲವುಂಟಾಯಿದ್ದಿತು. ಎನ್ಸಿ ಶಾಸಕರಾದ ಹಿಲಾಲ್ ಲೋನ್ ಮತ್ತು ಸಲ್ಮಾನ್ ಸಾಗರ್ ವಕ್ಫ್ ಕಾಯ್ದೆಯ ಪ್ರತಿಗಳನ್ನು ಹರಿದು ಹಾಕಿದರು. ಎನ್ಸಿ ಶಾಸಕ ಅಬ್ದುಲ್ ಮಜೀದ್ ಲಾರ್ಮಿ ಪ್ರತಿಭಟನೆಯಲ್ಲಿ ಸದನದಲ್ಲಿ ತಮ್ಮ ಜಾಕೆಟ್ ಹರಿದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು, ಎನ್ಸಿಯ ನಡೆಯನ್ನು ಖಂಡಿಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ, ಆಡಳಿತ ಪಕ್ಷದ ಬೇಡಿಕೆಯು “ಅತ್ಯಂತ ಅಸಾಂವಿಧಾನಿಕ” ಎಂದು ಕರೆದರು.