ಹರ್ಯಾಣ: ವಕ್ಫ್ ತಿದ್ದುಪಡಿ ಮಾಡಿ ಸಾಮಾಜಿಕ ನ್ಯಾಯ ಒದುಗಿಸುವ ಕೆಲಸ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹರ್ಯಾಣದ ಹಿಸಾರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಾಡಿ ಸಾಮಾಜಿಕ ನ್ಯಾಯ ಒದುಗಿಸುವ ಕೆಲಸ ಮಾಡಿದ್ದೇವೆ.
ವಕ್ಫ್ ತಿದ್ದುಪಡಿ ಮಾಡಿ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ವಕ್ಫ್ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರಿಗೆ ಅನುಕೂಲ ಆಗಲಿದೆ, ಕಾಂಗ್ರೆಸ್ ಅವಧಿಯಲ್ಲಿ ವಕ್ಫ್ ನಿಯಮಗಳನ್ನು ಬದಲಾಯಿಸಲಾಗಿತ್ತು.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ವೋಟ್ಬ್ಯಾಂಕ್ಗಾಗಿ ವಕ್ಫ್ ನಿಯಮಗಳನ್ನು ಬದಲಾಯಿಸಲಾಗಿತ್ತು, ವಕ್ಫ್ ಹೆಸರಲ್ಲಿ ಭೂಮಿಯನ್ನು ಕಬಳಿಕೆ ಮಾಡುತ್ತಿದ್ದರು, ಬಡವರ ಭೂಮಿಯನ್ನು ವಕ್ಫ್ ಭೂಮಾಫಿಯಾ ಲೂಟಿ ಮಾಡಿದೆ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
2013 ರಲ್ಲಿ ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ವಕ್ಫ್ ಕಾನೂನನ್ನು ಬದಲಾಯಿಸಿದೆ, ತಿದ್ದುಪಡಿಯನ್ನು ಅದರ ಸಾಂವಿಧಾನಿಕ ಪರಿಣಾಮಗಳನ್ನು ಪರಿಗಣಿಸದೆ ತರಾತುರಿಯಲ್ಲಿ ಮಾಡಲಾಗಿದೆ ಎಂದು ಹೇಳಿದರು. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ, ಕಾಂಗ್ರೆಸ್ ವಕ್ಫ್ ಕಾನೂನನ್ನು ಬದಲಾಯಿಸಿತು ಮತ್ತು ಅದನ್ನು ಬಾಬಾ ಸಾಹೇಬ್ ರಚಿಸಿದ ಸಂವಿಧಾನಕ್ಕಿಂತ ಶ್ರೇಷ್ಠ ಎಂದು ಕರೆಯಿತು. ಇದು ಬಾಬಾ ಸಾಹೇಬ್ಗೆ ಮಾಡಿದ ದೊಡ್ಡ ಅವಮಾನ ಎಂದರು.