ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಪರಿಸ್ಪರ ದಾಳಿಗಳು ನಡೆಯುತ್ತಲೇ ಇದೆ. ಪಾಕಿಸ್ತಾನಕ್ಕೆ ಟರ್ಕಿ ಪರೋಕ್ಷವಾಗಿ ಬೆಂಬಲ ನೀಡಿದ್ದು, 500ಕ್ಕೂ ಹೆಚ್ಚು ಡ್ರೋನ್ಗಳನ್ನು ನೀಡಿದೆ. ಎರಡು ದಿನಗಳಿಂದ ಪರಸ್ಪರ ವೈಮಾನಿಕ ದಾಳಿಗಳು ನಡೆಯುತ್ತಿವೆ. ಕೂಡ ಸಂಜೆಯಿಂದ ಮತ್ತೆ ಜಮ್ಮುವಿನಲ್ಲಿ ಡ್ರೋನ್ ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಭಾರತೀಯ ವಾಯುಪಡೆ ತಕ್ಕೆ ಉತ್ತರ ನೀಡಿದೆ.
ಇದೀಗ ಪ್ರಧಾನಿ ಶೆಹಬಾಜ್ ಷರೀಫ್ ಅವರು National Command Authority ತುರ್ತು ಸಭೆಯನ್ನು ಕರೆದಿದ್ದಾರೆ. ಇದು ದೇಶದ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಕಾರ್ಯಾಚರಣೆಯ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಮಾತ್ರ ಈ ಸಭೆಯನ್ನು ಕರೆಯಲಾಗುತ್ತದೆ.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಭಾರತ ಮತ್ತು ಪಾಕಿಸ್ತಾನ ಎರಡೂ ಪರಮಾಣು ಬಾಂಬ್ ಹೊಂದಿದೆ. ಭಾರತ ತಾನೂ ಯಾವತ್ತೂ ಮೊದಲು ಪರಮಾಣು ಅಸ್ತ್ರವನ್ನು ಪ್ರಯೋಗಿಸುವುದಿಲ್ಲ ಎಂದು ವಿಶ್ವಕ್ಕೆ ಹೇಳಿದೆ. ಆದರೆ ತನ್ನ ಮೇಲೆ ಪ್ರಯೋಗ ಮಾಡಿದರೆ ಪ್ರಯೋಗಿಸುತ್ತೇನೆ ಎಂದು ಸ್ಪಷ್ಟಪಡಿಸಿದೆ.
ಈ ಹಿಂದೆ ರಷ್ಯಾ–ಉಕ್ರೇನ್, ಇಸ್ರೇಲ್-ಹಮಾಸ್, ಇರಾನ್ ಯುದ್ಧ ನಡೆಯುವಾಗಲೂ ಪರಮಾಣು ಬಾಂಬ್ ಬಳಸುವ ಬಗ್ಗೆ ಬಹಳಷ್ಟು ಸುದ್ದಿಗಳು ಪ್ರಕಟವಾಗಿದ್ದವು. ಆದರೆ ಯಾರೂ ಅಣು ಬಾಂಬ್ ಪ್ರಯೋಗಿಸುವ ಧೈರ್ಯ ಮಾಡಿರಲಿಲ್ಲ. ಒಂದು ವೇಳೆ ಯಾವುದಾದರೂ ದೇಶ ಪರಮಾಣು ಬಾಂಬ್ ಬಳಸಿದರೆ ಆ ದೇಶದ ಜೊತೆ ವಿಶ್ವವೇ ಆರ್ಥಿಕ ಸಂಬಂಧವನ್ನೇ ಕಳೆದುಕೊಳ್ಳುತ್ತದೆ. ಹೀಗಾಗಿ ಎರಡನೇ ಮಹಾಯುದ್ಧದ ಬಳಿಕ ಇಲ್ಲಿಯವರೆಗೆ ಯಾವುದೇ ದೇಶ ಪರಮಾಣು ಅಸ್ತ್ರವನ್ನು ಬಳಸಿಲ್ಲ.