ಬಾಗಲಕೋಟೆ: ಅಭಿವೃದ್ಧಿಗೆ ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಯ್ಯ ಹತ್ರನೂ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬಹಿರಂಗವಾಗಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ.
ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.