ಬೆಂಗಳೂರು: ಕನ್ನಡಿಗರ ಕ್ಷಮೆ ಕೇಳಲು ಮೊಂಡಾಟ ಪ್ರದರ್ಶಿಸುತ್ತಿರುವ ತಮಿಳು ನಟ ಕಮಲ್ ಹಾಸನ್ ಅವರ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೆ ಇತಿಹಾಸ ಗೊತ್ತಿಲ್ಲ.
ನಾನು ವಾಸ್ತವಾಂಶ ಏನಿದೆ ಅಂತ ತಿಳಿದುಕೊಂಡು ಆಮೇಲೆ ಪ್ರತಿಕ್ರಿಯೆ ಕೊಡ್ತೇನೆ ಎಂದಿದ್ದಾರೆ. ಆದ್ರೆ ನಾವು ಮತ್ತು ತಮಿಳರು ನೆರೆಹೊರೆಯವರು. ನಾವು ಸೌಹಾರ್ದತೆಯಿಂದ ಬಾಳಬೇಕು. ನಾವು ಅವರಿಗೆ ಕಾವೇರಿ ನೀರು ಕೊಡ್ತೇವೆ ಎಂದು ಹೇಳಿದ್ದಾರೆ.
ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!
ತಮಿಳುನಾಡಿಂದ ತುಂಬಾ ಜನ ಕರ್ನಾಟಕದ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಅಲ್ಲಿಂದ ಇಲ್ಲಿಗೆ ಬಂದು ಕೆಲಸ ಮಾಡ್ತಿದ್ದಾರೆ. ನಾವೆಲ್ಲರೂ ಶಾಂತಿ ಕಾಪಾಡಿಕೊಳ್ಳುವುದು ಮುಖ್ಯ. ಯಾವುದೂ ಕೂಡ ಶಾಶ್ವತ ಅಲ್ಲ, ಎಲ್ಲವನ್ನೂ ಬಗೆಹರಿಸಲಾಗುತ್ತದೆ ಎಂದು ಹೇಳಿದರು.