Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    CM Siddaramaiah: ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸುತ್ತೇವೆ: ಸಿಎಂ ಭರವಸೆ!

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಘೋಷಿಸಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ (Vidhanasoudha) ಗ್ರ್ಯಾಂಡ್ ಸ್ಟೆಪ್ಸ್ ಬಳಿ ನೂತನ 262 ಅಂಬುಲೆನ್ಸ್‍ಗಳ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಯಾರೂ ಚಿಕಿತ್ಸೆ ಸಿಗದೇ ಸಾಯಬಾರದು. ಅಪಘಾತ ವೇಳೆ, ಹೆರಿಗೆ ವೇಳೆ ಚಿಕಿತ್ಸೆ, ಹೃದಯಾಘಾತ ಹೀಗೆ ಆದಾಗ ಚಿಕಿತ್ಸೆ ಸಿಗದೇ ಸಾಯಬಾರದು. ಅದಕ್ಕಾಗಿಯೇ 2008 ರಲ್ಲಿ ತುರ್ತು ಆರೋಗ್ಯಸೇವೆ ತರಲಾಯ್ತು. 236 ತಾಲೂಕುಗಳಿದ್ದು, ತಲಾ ನಾಲ್ಕರಂತೆ ಕನಿಷ್ಟ 840 ಅಂಬುಲೆನ್ಸ್ ಇರಬೇಕು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಕ್ಕಿದರೆ ಬಹಳ ಅನುಕೂಲ ಆಗುತ್ತೆ ಎಂದು ಹೇಳಿದರು.

    ಹೆಚ್ಚುವರಿ ಅಂಬುಲೆನ್ಸ್ (Ambulance) ಖರೀದಿಗೆ ಹಣಕಾಸು ಒದಗಿಸ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕಿತ್ತು. ವಿವಿಧ ಸ್ಕ್ಯಾನ್‍ಗಳಿಗೆ ಬಡವರು ವೆಚ್ಚ ಭರಿಸಲು ಆಗಲ್ಲ. ಇಲ್ಲಿಯವರೆಗೆ 25 ಕೋಟಿ ಜನರಿಗೆ ಸಿಎಂ ನಿಧಿಯಡಿ ಪರಿಹಾರ ಕೊಡುವ ಕೆಲಸ ಆಗಿದೆ. ನಾನು ಸಿಎಂ ನಿಧಿಯಡಿ 1/4 ವೆಚ್ಚ ಭರಿಸ್ತೇನೆ. ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಕೊಡುತ್ತಾರೆ ಅನ್ನೋ ಭಾವನೆ ಇದೆ. ಜಯದೇವ ಆಸ್ಪತ್ರೆಯಲ್ಲಿ ಉತ್ತಮ ವ್ಯವಸ್ಥೆ ಇದೆ ಅಂದ್ರೆ ಬೇರೆ ಕಡೆಯೂ ಕೊಡೋಕ್ಕಾಗುತ್ತೆ. ಈಗ ಸರ್ಕಾರಿ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲು ಸೂಚಿಸಿದ್ದೇನೆ. ಈಗ ಮೆಡಿಕಲ್ ಕಾಲೇಜುಗಳು ಜಾಸ್ತಿಯಾಗಿ ಡಾಕ್ಟರ್ ಗಳೂ ಜಾಸ್ತಿಯಾಗಿ ಬಿಟ್ಟಿದ್ದಾರೆ. ವೈದ್ಯರ ಹುದ್ದೆ ಭರ್ತಿಗೆ ಉತ್ತರ ಕರ್ನಾಟಕಕ್ಕೂ ಹೆಚ್ಚು ಗಮನ ಕೊಡಲು ಹೇಳಿದ್ದೇನೆ ಎಂದರು

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ವೊಂದರಲ್ಲಿ ಅಸ್ಥಿಪಂಜರ ಪತ್ತೆ!

    June 19, 2025

    ಇದು ಹೆಣ್ಮಕ್ಕಳು ತಿಳಿಯಲೇಬೇಕಾದ ವಿಚಾರ: ಈ ವಸ್ತುಗಳನ್ನು ಎಂದಿಗೂ ನಿಮ್ಮ ತವರು ಮನೆಯಿಂದ ತರಲೇಬೇಡಿ!

    June 19, 2025

    ಸಿಗ್ನಲ್ ಬಳಿ ನಿಂತಿದ್ದ ಬೈಕ್ ಗೆ ಸ್ಕೂಲ್ ವ್ಯಾನ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಸವಾರ ಪಾರು!

    June 19, 2025

    ಕೇಂದ್ರವು ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕ್ತಿದೆ: ವಿದೇಶದಿಂದ ಬರುತ್ತಿದ್ದಂತೆ ಪ್ರಿಯಾಂಕ ಖರ್ಗೆ ವಾಗ್ದಾಳಿ

    June 19, 2025

    ಮದುವೆಯಾಗುವುದಾಗಿ ವಿಚ್ಛೇದಿತ ಮಹಿಳೆ ನಂಬಿಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್; ಯುವಕ ಅರೆಸ್ಟ್!

    June 19, 2025

    ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!

    June 19, 2025

    ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವ ಸಂಭಾವನೆ ಹೆಚ್ಚಳ!

    June 19, 2025

    ಲಕ್ಷ-ಲಕ್ಷ ವಂಚನೆ ಕೇಸ್: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಗೋಲ್ಡ್ ಸುರೇಶ್!

    June 18, 2025

    ಕಾರ್ಯಕ್ರಮಕ್ಕೆ ಹೋದ ಯುವಕ ಕೇರಳದ ಕೊಳದಲ್ಲಿ ಬಿದ್ದು ಸಾವು!

    June 18, 2025

    ಕೆಆರ್ ಪುರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ!

    June 18, 2025

    ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್!

    June 18, 2025

    IPS ಅಧಿಕಾರಿ ವಿರುದ್ದ ಭ್ರಷ್ಟಾಚಾರ ಆರೋಪ ಕೇಸ್: ಬಂಧನ ಭೀತಿಯಿಂದ ಕೋರ್ಟ್’ಗೆ ಅರ್ಜಿ ಮೇಲೆ ಅರ್ಜಿ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.