ಭೋಪಾಲ್: ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಭೋಪಾಲ್ನಲ್ಲಿ ನಡೆದ ಮಹಿಳಾ ಸಶಕ್ತಿಕರಣ ಮಹಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,
ಆಪರೇಷನ್ ಸಿಂಧೂರ ಭಯೋತ್ಪಾದನೆಯ ವಿರುದ್ಧದ ಅತಿದೊಡ್ಡ ದಾಳಿಯಾಗಿದೆ. ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ ಎಂಬುದಕ್ಕೆ ಸ್ಪಷ್ಟ ನಿರ್ದಶನ ಆಗಿದೆ. ಇದು ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ ಎಂದು ʻಆಪರೇಷನ್ ಸಿಂಧೂರʼವನ್ನ ಬಣ್ಣಿಸಿದರು.
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ಭಾರತದ ಪ್ರತಿಕ್ರಿಯೆಯು ದೇಶದ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುವ ಜೊತೆಗೆ 140 ಕೋಟಿ ಭಾರತೀಯರ ಧ್ವನಿಯಾಗಿದೆ. ನೀವು ಗುಂಡು ಹಾರಿಸಿದ್ರೆ ಅದರ ಪರಿಣಾಮಗಳನ್ನು ಎದುರಿಸಲು ಸಿದ್ಧವಾಗಿರಿ ಎಂದು ಪಾಕ್ ಮತ್ತು ಪಾಕ್ ಪ್ರಾಯೋಜಿತ ಭಯೋತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದರು.