Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಳ್ಳನಿಗೆ ಪಿಳ್ಳೆ ನೆವ – ಅಶ್ವಥ್ ನಾರಾಯಣ್ ಹೀಗಂದಿದ್ಯಾಕೆ!?

    By AIN AuthorNovember 25, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆದ ವಿಚಾರಕ್ಕೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ವಾಪಾಸ್ ಪಡೆಯುವ ಸಂಪುಟ ನಿರ್ಣಯ ವಿಚಾರದಲ್ಲಿ ನಮ್ಮ ಸರ್ಕಾರ ಸಿಬಿಐಗೆ ವಹಿಸಿರುವುದರಲ್ಲಿ ಯಾವುದೇ ರೀತಿ ಕಾನೂನು ಉಲ್ಲಂಘನೆ ಆಗಿಲ್ಲ. ಹಾಗೇನಾದ್ರೂ ಆಗಿದ್ದರೆ ನ್ಯಾಯಾಲಯದಲ್ಲಿ ಇವರು ವಾದ ಮಾಡಬೇಕಿತ್ತಲ್ಲ ಎಂದರು.

    ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ವರ್ತಿಸುತ್ತಿದೆ. ಈ ವಿಚಾರದಲ್ಲಿ ತಪ್ಪು ಆಗಿದ್ದರೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಬೇಕಿತ್ತು. ಆಗ ಏಕೆ ನ್ಯಾಯಾಲಯಕ್ಕೆ ಹೋಗಿಲ್ಲ? ನಾವು ಅಧಿಕಾರದಲ್ಲಿದ್ದಾಗ ಎಲ್ಲವೂ ಕಾನೂನು ಪ್ರಕಾರವಾಗಿ ಕೆಲಸ ಮಾಡಿದ್ದೇವೆ. ನಾವು ಕಾನೂನು ಉಲ್ಲಂಘನೆ ಮಾಡಿದ್ದರೆ ನ್ಯಾಯಾಲಯ ಅದನ್ನು ಐದೇ ನಿಮಿಷದಲ್ಲಿ ತಿರಸ್ಕಾರ ಮಾಡುತ್ತಿತ್ತು. ಈ ಹಿಂದೆಯೂ ಹಲವು ಸಿಬಿಐ ಕೇಸ್ ಗಳನ್ನು ಬೇರೆ ಬೇರೆ ಸರ್ಕಾರಗಳು ಹಿಂದೆ ಪಡೆಯಲು ಪ್ರಯತ್ನಿಸಿ ವಿಫಲವಾಗಿವೆ ಹಾಗಾಗಿ ಈ ವಿಚಾರದಲ್ಲೂ ಸಿಬಿಐ ತನಿಖೆಯೇ ಮುಂದುವರಿಯುತ್ತದೆ.ಸತ್ಯಕ್ಕೆ, ನ್ಯಾಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದರು.

    ಡಿಕೆ ಶಿವಕುಮಾರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಕಾರಣಕ್ಕಾಗಿ ಕೇಸ್ ಆಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಎಲ್ಲಿಂದ ಗಳಿಕೆಯಾಗಿದೆ? ಎಲ್ಲಿಂದ ಬಂತು? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಇದಕ್ಕೆ ಉತ್ತರ ಕೊಡಬೇಕು ತಾನೇ? ಯಾಕೆ ಹೆದರಿಕೊಳ್ಳುತ್ತಿದ್ದಾರೆ? ಯಾಕೆ ಓಡಿ ಹೋಗುತ್ತಿದ್ದಾರೆ? ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಅನ್ನೋ ರೀತಿಯಲ್ಲಿ ತಪ್ಪಿಸಿಕೊಳ್ಳೋ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರಗೆ ತಿರುಗೇಟು ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025

    ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

    June 13, 2025

    ಹೊಸ ಮನೆಗೆ ಕಾಲಿಡುವ ತವಕದಲ್ಲಿದ್ದ ಕನಸು ನುಚ್ಚುನೂರು: ವಿಮಾನ ಪತನದಲ್ಲಿ ನರ್ಸ್ ರಂಜಿತಾ ದುರಂತ ಅಂತ್ಯ

    June 13, 2025

    Ahmedabad plane crash: ಲಂಡನ್‌ನಲ್ಲಿ ಹೊಸ ಬದುಕು ಕಟ್ಟಿಕೊಳ್ಳಬೇಕಿದ್ದ ವೈದ್ಯ ಕುಟುಂಬದ ದುರಂತ ಅಂತ್ಯ..

    June 13, 2025

    Ahmedabad Plane Crash: ಗಗನಸಖಿ ಕೊನೆಯ Video ವೈರಲ್!

    June 13, 2025

    ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

    June 13, 2025

    Vijay Rupani: ಮಾಜಿ ಸಿಎಂ ವಿಜಯ್ ರೂಪಾನಿಯ 12ರ ನಂಟು..! ಇಲ್ಲಿದೆ ಇಂಟ್ರೆಸ್ಟಿಂಗ್ ಫ್ಯಾಕ್ಟರ್

    June 13, 2025

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.