Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿಗಣತಿ ವರದಿಗೆ ನಾಳೆ ಸಿಗುತ್ತಾ ಮೋಕ್ಷ ?  ಹೈಕಮಾಂಡ್‌ ಅಸ್ತು !ಸಿದ್ದು ಸಂಪುಟ ಸಭೆ ಮೇಲೆ ಎತ್ತರ ಚಿತ್ತ..!

    By Author AINApril 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ.

    ಗುಜರಾತ್‌ ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಜಾರಿಗೆ ತರುವ ಸಂಬಂಧ ಹೈಕಮಾಂಡ್‌ ನಾಯಕರಿಂದ ಒಪ್ಪಿಗೆ ಪಡೆದಿದ್ದು, ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

    ಹೆಚ್​ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್​ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಬಳಿಕ  ಕೆ.ಜಯಪ್ರಕಾಶ್‌ ಹೆಗ್ಡೆ ಅಧ್ಯಕ್ಷರಾಗಿ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿಯೈನ್ನು ಸಂಪುಟದಲ್ಲಿಅಂಗೀಕರಿಸಲು ತಯಾರಿ ನಡೆದಿದೆ. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ.

    ಕ್ಯಾಬಿನೆಟ್‌ ಸಭೆಯ ಕಾರ್ಯಸೂಚಿ ಲಿಸ್ಟ್‌ ನಲ್ಲಿಈ ವಿಷಯ ಸೇರ್ಪಡೆಯಾಗಿದೆ. ಜಾತಿ ಗಣತಿ ಅಂಗೀಕಾರದ ಬಳಿಕ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.

    ಲಿಂಗಾಯತ, ಒಕ್ಕಲಿಗರ ವಿರೋಧ

    ಕಾಂತರಾಜ್‌ ನೇತೃತ್ವದಲ್ಲಿ ನಡೆದ ಜಾತಿ ಗಣತಿ ವರದಿಗೆ ರಾಜ್ಯದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ತೀವ್ರ ವಿರೋಧ ಮಾಡಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಸಂಪುಟದ ಲಿಂಗಾಯತ ಹಾಗೂ ಒಕ್ಕಲಿಗ ಸಮಾಜದ ಸಚಿವರೇ ಜಾತಿ ಗಣತಿ ವರದಿಗೆ ವಿರೋಧಿಸಿದ್ದಾರೆ. ಹೀಗಾಗಿ ನಾಳೆ ಅಂದರೆ ಶುಕ್ರವಾರ ನಡೆಯುವ ಸಂಪುಟ ಸಭೆಯಲ್ಲಿ ಲಿಂಗಾಯತ, ಒಕ್ಕಲಿಗ ಸಚಿವರು ಜಾತಿ ಗಣತಿ ವರದಿಗೆ ಅಸ್ತು ಅಂತಾರಾ ಅನ್ನೋದನ್ನ ಕಾದು ನೋಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಅಂತಾರಾಷ್ಟ್ರೀಯ ಯೋಗ ದಿನ: “ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ” ವಿಶ್ವವಿದ್ಯಾಲಯದಿಂದ ಯೋಗಾಭ್ಯಾಸ

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025

    ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್’ನಲ್ಲಿ ಯಶಸ್ವಿಯಾಗಿ ನಡೆದ ಬೃಹತ್ “ಉಚಿತ ಆರೋಗ್ಯ ಶಿಬಿರ”

    June 25, 2025

    ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!

    June 25, 2025

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    June 25, 2025

    ಅಬ್ಬಬ್ಬಾ.. ಜನರು ಹೆಚ್ಚು ಖರ್ಚು ಮಾಡೋದು ಇದಕ್ಕೇನಾ..? ವರದಿಯಲ್ಲಿ ಶಾಕಿಂಗ್ ವಿಷಯ ಬಯಲು

    June 25, 2025

    ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ: ಎಂಬಿ ಪಾಟೀಲ್!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.