Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಕೇಸ್:‌ ಸಂತ್ರಸ್ತ ಮಹಿಳೆ ಆರೋಗ್ಯ ವಿಚಾರಿಸಿದ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ

    By AIN AuthorDecember 16, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯವನ್ನು ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ ವಿಚಾರಿಸಿತು.

    ಸಂಸದರಾದ ಅಪ್ರಜಿತಾ ಸಾರಂಗಿ, ಸುನಿತಾ ದುಗ್ಗಿ, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನೊಳಗೊಂಡ ಐದು ಜನರ ಸಮಿತಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು. ಘಟನೆಯಿಂದ ಧೃತಿಗೆಡಬೇಡಿ ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.

    https://ainlivenews.com/wp-content/uploads/2023/12/WhatsApp-Video-2023-12-16-at-13.37.38_cbfa66dc.mp4

    ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದೆ ಅಪ್ರಜಿತಾ ಸಾರಂಗಿ ಮಾತನಾಡಿ, ಬೆಳಗಾವಿ ನಗರದಿಂದ 15 ಕಿ.ಮೀ. ದೂರದಲ್ಲಿರುವ ವಂಟಮೂರಿ ಗ್ರಾಮದಲ್ಲಿ ರಾತ್ರಿ 1.30ರ ಸುಮಾರಿಗೆ ಮನೆಗೆ ನುಗ್ಗಿ, ಮಹಿಳೆಯನ್ನು ಹೊರ ತಂದ ಪುರುಷರು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿ, ಬಳಿಕ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಘಟನೆ ಆದ ಎರಡು ಗಂಟೆ ಬಳಿಕ ಸ್ಥಳಕ್ಕೆ ಪೊಲೀಸರು ಬಂದರು. ಸಿಪಿಐಗೆ ವಿಷಯ ತಿಳಿಸಿದರೂ‌ ಆರು ಗಂಟೆಗೆ ಬರುತ್ತಾರೆ. ಇದೇನು ಸಣ್ಣ ಘಟನೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಆದಿವಾಸಿ ಮಹಿಳೆಯರಿಗೆ ಇಲ್ಲಿ ರಕ್ಷಣೆ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲೆ ಈ ಕೃತ್ಯ ಆಗಿರುವುದು ಅಮಾನವೀಯ ಎಂದು ಕಿಡಿಕಾರಿದರು.

    ಆಶಾ ಲಾಕ್ರಾ ಮಾತನಾಡಿ, ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ. ಆದರೂ ಸದನದಲ್ಲಿ ಕಾಂಗ್ರೆಸ್ ನಾಯಕರು ಈ ಬಗ್ಗೆ ಧ್ವನಿ ಎತ್ತಲಿಲ್ಲ. ದಲಿತರನ್ನು ಕೇವಲ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ. ಇಡೀ ಸರ್ಕಾರ, ಮುಖ್ಯಮಂತ್ರಿ, ಡಿಜಿಪಿ ಬೆಳಗಾವಿಯಲ್ಲಿದ್ದರೂ ಸ್ಥಳಕ್ಕೆ ಭೇಟಿ‌ ಕೊಡಲಿಲ್ಲ. ಕೃತ್ಯ ನಡೆದ ಬಳಿಕವೂ ಕಾನೂತ್ಮಾಕವಾಗಿ ಮಹಿಳೆಯ ರಕ್ಷಣೆಗೆ ಏನೆಲ್ಲಾ ಆಗಬೇಕಿತ್ತು ಅದು ಎಲ್ಲವೂ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಉತ್ತರ ಪ್ರದೇಶದ ಹತ್ರಾಸ್ ಹಾಗೂ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಸಂದರ್ಭದಲ್ಲಿ ಅಲ್ಲಿಯೂ ಬಿಜೆಪಿ‌ ಸತ್ಯಶೋಧನಾ ಸಮಿತಿ ಕಳಿಸಿ ಕೊಟ್ಟಿತ್ತೆ ಎಂಬ ಮಾಧ್ಯಮಗಳ ಪ್ರಶ್ನೆಗೆ ತಡಬಡಿಸಿದ ಸಮಿತಿ ಸದಸ್ಯರು, ಕರ್ನಾಟಕದ ಮುಖ್ಯಮಂತ್ರಿಯನ್ನೆ ಕೇಳಿ. ಅವರು ಯಾಕೆ ಸ್ಥಳಕ್ಕೆ ಭೇಟಿ ಕೊಟ್ಟು ಮಹಿಳೆಗೆ ಸಾಂತ್ವನ ಹೇಳಲಿಲ್ಲ. ಎಂದು ಹೇಳಿ ಸಮರ್ಪಕವಾಗಿ ಉತ್ತರಿಸಿದೇ ಹೊರಟು ಹೋದರು.

    ಈ ವೇಳೆ ಕೇಂದ್ರ ಬಿಜೆಪಿ ಸಮಿತಿಗೆ ಸಂಸದೆ ಮಂಗಲ ಅಂಗಡಿ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ. ರಾಜೇಶ ನೇರ್ಲಿ ಸೇರಿ ಮತ್ತಿತರರು ಸಾಥ್ ಕೊಟ್ಟರು.

     

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!

    July 5, 2025

    ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ದುರಂತ- ಕಂಡಕ್ಟರ್ ಹೇಳಿದ್ದೇನು?

    July 5, 2025

    ಪೊಲೀಸರ ಎದುರೇ ಬಂದೂಕು ಹಿಡಿದು ಫೈರ್‌ ಮಾಡಿದ ಜಾರಕಿಹೊಳಿ ಪುತ್ರ

    July 5, 2025

    ಜಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜಿಸಿದ್ದ ಎಎಸ್ಐಗೆ ಹೃದಯಾಘಾತ

    July 5, 2025

    ಆರ್ ಎಸ್ ಎಸ್ ಎಸ್ ಬಗ್ಗೆ ಟೀಕೆ ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್‌ಡಿಕೆ ಕೆಂಡ

    July 5, 2025

    ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ನೌಕರ ಸಾವು

    July 5, 2025

    ತಹಶೀಲ್ದಾರ್ ಕಚೇರಿಗೆ ಕಂದಾಯ ಇಲಾಖೆ ಕಮೀಷನರ್ ದಿಢೀರ್ ಭೇಟಿ

    July 5, 2025

    ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    July 5, 2025

    ಕೊಪ್ಪಳದಲ್ಲಿ ಹೃದಯಾಘಾತಕ್ಕೆ ರಂಗಭೂಮಿ ಕಲಾವಿದ ಬಲಿ

    July 5, 2025

    ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ; ತಾಯಿ, ಮಗು ಆರೋಗ್ಯ

    July 5, 2025

    ಮೊಹರಂ ಆಚರಣೆ ; ನಿಗಿ ನಿಗಿ ಕೆಂಡದ ಮೇಲೆ ಕುಳಿತು ಭಕ್ತಿ ಪ್ರದರ್ಶನ

    July 5, 2025

    ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.