ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ಯಶ್ ತಮ್ಮದೇ ಮಾನ್ ಸ್ಟರ್ ಮೈಡ್ ಪ್ರೊಡಕ್ಷನ್ ಹುಟ್ಟುಹಾಕಿದ್ದು, ಈ ನಿರ್ಮಾಣ ಸಂಸ್ಥೆಯಡಿ ರಾಮಾಯಣ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಯಶ್ ತಾಯಿ ಕೂಡ ನಿರ್ಮಾಪಕಿಯಾಗಿ ಹೆಜ್ಜೆ ಇಟ್ಟಿದ್ದಾರೆ. ತಮ್ಮದೇ PA ಎಂಬ ಪ್ರೊಡಕ್ಷನ್ ಶುರು ಮಾಡಿದ್ದಾರೆ. ಈ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಸಿನಿಮಾ ಮೂಡಿ ಬಂದಿದ್ದು, ಯುವ ನಿರ್ದೇಶಕ ಶ್ರೀರಾಜ್ ಆಕ್ಷನ್ ಕಟ್ ಹೇಳಿದ್ದಾರೆ. ಪೃಥ್ವಿ ಅಂಬರ, ಕಾವ್ಯಾ ನಾಯಕ-ನಾಯಕಿಯಾಗಿ ನಟಿಸಿದ್ದಾರೆ.
ಕೊತ್ತಲವಾಡಿ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಚಿತ್ರ ಬಿಡುಗಡೆಗೂ ಮೊದಲೇ ಪುಷ್ಪ ಅರುಣ್ ಕುಮಾರ್ ಮತ್ತೊಂದು ಸಿನಿಮಾ ಘೋಷಿಸಿದ್ದಾರೆ. ಪುಷ್ಪ ಅವರು ನಿರ್ಮಾಣದ ಎರಡನೇ ಚಿತ್ರಕ್ಕೆ ಶರಣ್ ಅವರು ನಾಯಕ. ಕೊತ್ತಲವಾಡಿ ಟೀಸರ್ ಅನ್ನು ಶರಣ್ ಬಿಡುಗಡೆ ಮಾಡಿದ್ದಾರೆ. ಈ ವೇದಿಕೆಯಲ್ಲಿ ಪುಷ್ಪ ಅವರು ಹೊಸ ಸುದ್ದಿ ನೀಡಿದರು. ‘ನಾವು ಶರಣ್ ಅವರ ಅಭಿಮಾನಿ. ನಮ್ಮ ಸಂಸ್ಥೆಯಿಂದ 2ನೇ ಸಿನಿಮಾವನ್ನು ಶರಣ್ ಜೊತೆ ಮಾಡುತ್ತೇವೆ. ಮೊದಲ ಚಿತ್ರವನ್ನೇ ಅವರ ಜೊತೆ ಮಾಡಬೇಕಿತ್ತು. ಆದರೆ ನನಗೆ ಧೈರ್ಯ ಇರಲಿಲ್ಲ. ಈಗ ಒಂದು ಸಿನಿಮಾವನ್ನು ಬೇರೆಯವರ ಜೊತೆ ಮಾಡಿದ್ದೇನೆ. 2ನೇ ಸಿನಿಮಾವನ್ನು ಶರಣ್ ಜೊತೆ ಮಾಡುತ್ತೇನೆ ಎಂಬುದನ್ನು ವೇದಿಕೆಯಲ್ಲಿ ಹೇಳುತ್ತಿದ್ದೇನೆ’ ಎಂದಿದ್ದಾರೆ.