ಧಾರವಾಡ: ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಸ್ವಾಮೀಜಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದ ಕಾಂಗ್ರೆಸ್ ಶಾಸಕ ಹಾಗೂ ಕರ್ನಾಟಕ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರನ್ನು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಂದಿಗೆ ಹೋಲಿಕೆ ಮಾಡಿದ್ದಾರೆ.
ಕೆಲ ಹೊತ್ತನ ಹಿಂದಷ್ಟೆ ಬಾಗಲಕೋಟೆ ಜಿಲ್ಲೆ ಹುನಗುಂದಲ್ಲಿ ಮಾತನಾಡಿದ್ದ ಕಾಶಪ್ಪನರ್, ಗುರುಗಳು ಸ್ವಯಂಘೋಷಿತರಾಗಿ ನೇಮಕವಾಗಿಲ್ಲ. ಕಾಲ ಕಾಲಕ್ಕೆ ಏನೇನು ಆಗಬೇಕೋ ಅದೆಲ್ಲಾ ಆಗುತ್ತದೆ. ಬದಲಾವಣೆ ಕಾಲ ಬಂದಾಗ ಯಾರೂ ತಡೆಯುವುದಿಲ್ಲ. ಭೂಮಂಡಲದಲ್ಲೇ ಯಾರನ್ನು ಉಳಿಸಲು ಆಗುವುದಿಲ್ಲ. ಸುನಾಮಿ ಯಾರನ್ನಾದ್ರೂ ಕೇಳಿ ಬರುತ್ತಾ?. ಇವರ ಕಾಲ ಮುಗಿದಿದೆ, ಬದಲಾವಣೆ ಆಗಿಯೇ ಆಗುತ್ತದೆ ಎಂದಿದ್ದರು.
ವಿಜಯಾನಂದ ಕಾಶಪ್ಪನವರ್ ಹೇಳಿಕೆಗೆ ಹಿಂದಷ್ಟೇ ಕಲಘಟಿಯಲ್ಲಿ ಕಿಡಿಕಾರಿದ ಯತ್ನಾಳ್, ಇದು ಹಂದಿ ಇದ್ದ ಹಾಗ. ಕೂಡಲಸಂಗಮ ಶ್ರೀಗಳನ್ನು ಟಿಕೆಟ್ ಕೊಡಿಸ ಎಂದು ಎಂದೂ ದೆಹಲಿಗೆ ಕರೆದುಕೊಂಡು ಹೋಗಿಲ್ಲ. ಆದರೆ, ವಿನಯಕುಲಕರ್ಣಿ, ಲಕ್ಷ್ಮಿ ಹೆಬ್ಬಾಳಕರ್ ರಾಜಕೀಯವಾಗಿ ಶ್ರೀಗಳನ್ನು ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗ ಅಂತಹ ಅಯೋಗ್ಯರ ಬಗ್ಗೆ ಮಾತನಾಡಲ್ಲ ಎಂದು ಯತ್ನಾಳ್ ಟಕ್ಕರ್ ಕೊಟ್ಟಿದ್ದಾರೆ.
ಈ ಮೂಲಕ ಪಂಚಮಸಾಲಿ ಪೀಠ ಹಾಗೂ ೨ಎ ಮೀಸಲಾತಿ ಹೋರಾಟಕ್ಕೆ ಮತ್ತೆ ಬಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.