ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ. ಒಂದು ವಾರದೊಳಗೆ ಸಿಬಿಐಗೆ ಶರಣಾಗುವಂತೆ ಸೂಚಿಸಲಾಗಿತ್ತು.
ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಇಂದು ಜನಪ್ರತಿನಿಧಿಗಳ ಕೋರ್ಟ್ಗೆ ಹಾಜರಾಗಿದ್ದಾರೆ. ನ್ಯಾಯಾಲಯದ ಸೂಚನೆ ಮೇರೆಗೆ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಪರಪ್ಪನ ಅಗ್ರಹಾರಕ್ಕೆ ಶಾಸಕರನ್ನು ಶಿಫ್ಟ್ ಮಾಡಲಾಗುವುದು.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ಕೋರ್ಟ್ ನಿರಾಕರಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹಿಳಾ ಸಾಕ್ಷಿಯೊಬ್ಬರಿಗೆ ಕೋರ್ಟ್ ಕಾರಿಡಾರ್ನಲ್ಲೇ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ. ಎ9 ಆರೋಪಿ ಅಶ್ವಥ್ ಗೌಡನಿಂದ ಬೆದರಿಕೆ ಹಾಕಲಾಗಿದೆ. ಆರೋಪಿ ಬೆದರಿಕೆ ಹಾಕಿರುವುದಾಗಿ ಕೋರ್ಟ್ಗೆ ಮಹಿಳೆ ಇ-ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ.
ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆಯಾಗಿದೆ. ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ಸಿಐಎಸ್ಎಫ್ನಿಂದ ತನಿಖೆಗೆ ಕೋರ್ಟ್ ಆದೇಶಿಸಿದೆ.